ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.
ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ ಕೆಲವು ಪ್ರಶ್ನೆಗಳು.
ಮೂಲ : social network
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…