ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.
ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ ಕೆಲವು ಪ್ರಶ್ನೆಗಳು.
ಮೂಲ : social network
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…