Advertisement
Opinion

ರೈತ ಫಲಾನುಭವಿಗಳನ್ನು ಅಲೆದಾಡಿಸದೇ ಸವಲತ್ತು ನೀಡಬಹುದೇ…? | ರೈತರು ಇಂತಹ ಕಡೆ ಪ್ರಶ್ನಿಸುವಂತಾಗಲು ಸಾಧ್ಯವೇ…?

Share

ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ  ನಡೆದುಕೊಂಡು ಬಂದಿದೆ.

ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.

ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ  ಕೆಲವು ಪ್ರಶ್ನೆಗಳು.

  1. ಅಡಿಕೆ ಒಂದು ತೋಟಗಾರಿಕಾ ಬಹು ವಾರ್ಷಿಕ ಬೆಳೆ, ಹಾಗಾಗಿ ಹಿಂದಿನ ವರ್ಷಗಳಲ್ಲಿ ವಿಮೆ ನೀಡಿದ ದಾಖಲೆ ಇದ್ದಾಗ ಈ ವರ್ಷ ನಿರಾಕರಿಸಿದರೆ, ಗ್ರಾಹಕ ನ್ಯಾಯಾಲಯದಲ್ಲಿ ಹೋರಾಟ ನಡೆಸಿ ಗೆಲುವು ಪಡೆಯಬಹುದೇ?.
  2. ಈ ವರ್ಷ ಅನೇಕ ರೈತರು ವಿಮೆ ಪಾವತಿಸಲಾಗದೆ ಸೌಲಭ್ಯದಿಂದ ಹೊರಗೆ ಉಳಿಯುತ್ತಿದ್ದು, ಅದರ ಕುರಿತು ವಿಮಾ ಕಂಪನಿಯವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲು ಅವಕಾಶ ಇದೆಯೇ?.
  3. ವಿಮೆ ಅರ್ಜಿಯಲ್ಲಿ ಬೆಳೆಯ ದೃಢೀಕರಣ ಕಡ್ಡಾಯ ಎಂದು ಸಹಿ ಹಾಕಿಸಿಕೊಳ್ಳುವುದು ಅಪರಾಧ ಅಲ್ಲವೇ?.
  4. ಪ್ರತ್ಯಕ್ಷ ಜಮೀನಿನಲ್ಲಿ ಬೆಳೆ ಇರುವಾಗ, ಅದನ್ನು ನಂಬದೆ ತಂತ್ರಾಂಶದಲ್ಲಿ ಇರುವ ಮಾಹಿತಿಯನ್ನು ನಂಬುವುದು ರೈತನಿಗೆ ಮಾಡುವ ಅಪಮಾನ ಹಾಗೂ ರೈತನ ಮೂಲಭೂತ ಹಕ್ಕಿನ ಉಲ್ಲಂಘನೆ ಅಲ್ಲವೇ?.
  5. ನ್ಯಾಯಯುತವಾಗಿ ವಿಮೆ ಕಟ್ಟಲು ಮುಂದಾದ ರೈತನಿಗೆ ವಿಮಾ ಸೌಲಭ್ಯವನ್ನು ನಿರಾಕರಿಸುವುದು ದಂಡಾರ್ಹ ಅಪರಾಧ ಅಲ್ಲವೇ?.
  6. ರೈತರು ಈ ಬಗ್ಗೆ ಸ್ವಾಭಿಮಾನದ ಹೋರಾಟ ನಡೆಸಿ, ಈ ರೀತಿಯ ತಾಂತ್ರಿಕ ತೊಂದರೆಗಳನ್ನು ಉಂಟು ಮಾಡಿರುವವರ ವಿರುದ್ಧ ವಿಜಯ ಗಳಿಸುವುದು ಅಪೇಕ್ಷಣೀಯ ಅಲ್ಲವೇ?.
  7. ಈ ವಿಮಾ ಸೌಲಭ್ಯವನ್ನು ಪಡೆಯುವಲ್ಲಿ ಉಂಟಾದ ಸಮಯ, ನೆಮ್ಮದಿ, ಆರ್ಥಿಕ ನಷ್ಟಗಳಿಗೆ ಪರಿಹಾರ ಸಿಗಬೇಕಲ್ಲವೇ?.

ಮೂಲ : social network

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

5 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

5 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

6 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

7 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

19 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

19 hours ago