ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.
ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ ಕೆಲವು ಪ್ರಶ್ನೆಗಳು.
ಮೂಲ : social network
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…