Advertisement
MIRROR FOCUS

ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ | ದೇಶದಲ್ಲೇ ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ತರಬೇತಿ | ಗ್ರಾಮೀಣಾಭಿವೃದ್ಧಿಯ ಮಹತ್ವದ ಹೆಜ್ಜೆ |

Share

ಗ್ರಾಮೀಣ ಭಾರತವನ್ನು ಸಬಲೀಕರಿಸುವ ಉದ್ದೇಶದಿಂದ ಭಾರತ ಸರ್ಕಾರವು 2024 ರಲ್ಲಿ ಕೃಷಿ ಸಖಿ ಒಗ್ಗೂಡುವಿಕೆ ಕಾರ್ಯಕ್ರಮವನ್ನು (KSCP)  ಪ್ರಾರಂಭಿಸಿದೆ. ಇದರ ಮುಖ್ಯ ಗುರಿ ಗ್ರಾಮೀಣ ಮಹಿಳೆಯರನ್ನು ಗುರುತಿಸಿ ಕೃಷಿ ಸಖಿಯರನ್ನಾಗಿ ರೂಪಿಸುವುದು ಮತ್ತು ಅವರಿಗೆ ಅರೆ-ವಿಸ್ತರಣಾ ಕಾರ್ಯಕರ್ತರಾಗಿ ತರಬೇತಿ ಹಾಗೂ ಪ್ರಮಾಣಪತ್ರ ನೀಡುವುದು. ಇವರು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಮತ್ತು ಸರ್ಕಾರದ ಇಲಾಖಾ ಅಧಿಕಾರಿಗಳು ಹಾಗೂ ರೈತರ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ.

Advertisement
Advertisement

ಗ್ರಾಮೀಣಾಭಿವೃದ್ಧಿಯಲ್ಲಿ ಕೃಷಿ ಸಖಿಯರ  ಮಹತ್ವದ ಪಾತ್ರವನ್ನು ಗಮನಿಸಿ ಪುತ್ತೂರಿನ ಭಾರತೀಯ ಗೇರು ಸಂಶೋಧನಾ ನಿರ್ದೇಶನಾಲಯವು, ಸುಳ್ಯ ತಾಲೂಕಿನ ಕೃಷಿ ಸಖಿಯರಿಗಾಗಿ “ಗೋಡಂಬಿ ಉತ್ಪಾದನೆ ಮತ್ತು ಸುಗ್ಗಿಯ ನಂತರದ ತಂತ್ರಜ್ಞಾನಗಳ ಕುರಿತು ಮೂರು ದಿನಗಳ ಸಾಮರ್ಥ್ಯ ವೃದ್ಧಿ ಕಾರ್ಯಾಗಾರ”ವನ್ನು ಆಯೋಜಿಸಿತ್ತು. ಈ ತರಬೇತಿಯು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ವೈಜ್ಞಾನಿಕ ಗೇರು ಕೃಷಿಯನ್ನು ಉತ್ತೇಜಿಸಲು ಕೃಷಿ ಸಖಿಯರನ್ನು ಪರಿಣಾಮಕಾರಿ ಬದಲಾವಣೆಯ ಪ್ರತಿನಿಧಿಗಳನ್ನಾಗಿ ಮಾಡುವುದನ್ನು ಗುರಿಯಾಗಿಸಿಕೊಂಡಿದ್ದು, ಎನ್ ಆರ್ ಎಲ್ ಎಂ ಸಂಜೀವಿನಿ ಸುಳ್ಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇತಾ ಹಾಗೂ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಹಾಗೂ ಕೃಷಿ ಸಖಿಯರ ಆಸಕ್ತಿಯು ಈ ತರಬೇತಿಗೆ ಪುಷ್ಠಿ ನೀಡಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 20 ರಂದು ಸುಳ್ಯ ತಾಲೂಕು ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಭಾ. ಕೃ. ಸಂ. ಪ. ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಜೆ. ದಿನಕರ ಅಡಿಗ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸುಳ್ಯ ತಾಲೂಕಿನ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಡಾ. ಪ್ರಮೋದ್ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್  ಯೋಜನಾ ನಿರ್ದೇಶಕರಾದ  ಜಯರಾಮ್ ಉಪಸ್ಥಿತರಿದ್ದರು.

ಅತಿಥಿ ಭಾಷಣದಲ್ಲಿ ಮಾತನಾಡಿದ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ. ಜೆ. ದಿನಕರ ಅಡಿಗ , ಜ್ಞಾನವನ್ನು ಪ್ರಜಾಪ್ರಭುತ್ವೀಕರಣಗೊಳಿಸುವಲ್ಲಿ ಮತ್ತು ರೈತರನ್ನು ಸಬಲೀಕರಿಸುವಲ್ಲಿ ಕೃಷಿ ಸಖಿಯರ ಪಾತ್ರದ ಬಗ್ಗೆ ಹೇಳಿದರು. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ – ಕೃಷಿ ಮತ್ತು ಸಂಬಂಧಿತ ವಲಯಗಳ ಪುನರುಜ್ಜೀವನಕ್ಕಾಗಿ ಲಾಭದಾಯಕ ವಿಧಾನಗಳು ಯೋಜನೆಯಡಿ ಮಾದರಿ ಗೇರು ಕೃಷಿ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಹೊಸ ಯೋಜನೆಗೆ ಅನುಮೋದನೆ ದೊರಕಿದ್ದು, ಅದರ ಅನುಷ್ಠಾನಕ್ಕಾಗಿ ಸಂಸ್ಥೆಯು ಸಂಪಾಜೆ ಮತ್ತು ಕೆಲವು ಇತರ ಗ್ರಾಮಗಳನ್ನು ದತ್ತು ತೆಗೆದುಕೊಳ್ಳಲು ಯೋಜಿಸಿದೆ ಎಂದು ತಿಳಿಸಿದರು. ಈ ಯೋಜನೆಯ ಮುಖ್ಯ ಉದ್ದೇಶವು ಇತ್ತೀಚಿನ ಗೋಡಂಬಿ ತಂತ್ರಜ್ಞಾನಗಳನ್ನು ಪ್ರದರ್ಶಿಸುವುದು ಮತ್ತು ಗ್ರಾಮ ಸಮೂಹಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜೀವನೋಪಾಯ ಸೃಷ್ಟಿಗಾಗಿ ಗೇರುಬೀಜ ನರ್ಸರಿ, ಸಮುದಾಯ ಮಟ್ಟದ ಗೇರು ಹಣ್ಣು ಸಂಸ್ಕರಣಾ ಘಟಕದಂತಹ ಉದ್ದಿಮೆಗಳನ್ನು ಅಭಿವೃದ್ಧಿಪಡಿಸುವುದು ಎಂದು ವಿವರಿಸಿದರು.

ತರಬೇತಿ ಸಂಯೋಜಕಿ ಹಾಗೂ ಯೋಜನೆಯ ಪ್ರಧಾನ ತಜ್ಞೆಯಾದ ಡಾ. ಅಶ್ವಥಿ ಚಂದ್ರಕುಮಾರ್ , ಈ ತರಬೇತಿಯು ಗೇರು ಕೃಷಿ ಮತ್ತು ಗೋಡಂಬಿ ಸಂಸ್ಕರಣೆಯಲ್ಲಿ ಮಹತ್ವದ ಬದಲಾವಣೆ ತರಲು ಕೃಷಿ ಸಖಿಯರ ಜ್ಞಾನ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಸಂಕ್ಷಿಪ್ತವಾಗಿ ತಿಳಿಸಿದರು. ಇದು ಕೃಷಿ ಸಖಿಯರನ್ನು ಸಜ್ಜುಗೊಳಿಸುವ ಮೊದಲ ಹೆಜ್ಜೆಯಾಗಿದ್ದು, ಹಳ್ಳಿಗಳಲ್ಲಿ ಗೇರು ಹಣ್ಣು ಸಂಸ್ಕರಣೆಯನ್ನು ಪ್ರಾರಂಭಿಸಲು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ನ ಸಕ್ರಿಯ ಸಹಭಾಗಿತ್ವವನ್ನು ಕೋರಿದರು.

ಮೂರು ದಿನಗಳ ಈ ಕಾರ್ಯಾಗಾರದಲ್ಲಿ ವೈಜ್ಞಾನಿಕ ಗೇರು ಕೃಷಿಯ ವಿವಿಧ ಅಂಶಗಳನ್ನು ಒಳಗೊಂಡ ವಿವಿಧ ತಾಂತ್ರಿಕ ತರಗತಿಗಳನ್ನು ಆಯೋಜಿಸಲಾಗಿತ್ತು. ಗೋಡಂಬಿಯ ಅಧಿಕ ಇಳುವರಿ ತಳಿಗಳು, ಕೀಟ ಮತ್ತು ರೋಗ ನಿರ್ವಹಣೆ, ಮರದ ಹಂದರ ನಿರ್ವಹಣೆ, ಗೇರು ಕೃಷಿಯಲ್ಲಿ ಯಾಂತ್ರೀಕರಣ, ಮಣ್ಣು ಮತ್ತು ಪೋಷಕಾಂಶಗಳ ನಿರ್ವಹಣೆ, ಗೇರು ಹಣ್ಣಿನ ಮೌಲ್ಯವರ್ಧನೆ ಮತ್ತು ಕಚ್ಚಾ ಗೋಡಂಬಿಗಳ ಸಂಸ್ಕರಣೆ. ಕೃಷಿ ಸಖಿಯರಿಗೆ ಗೇರು ಕೃಷಿ ಉತ್ತೇಜನಕ್ಕಾಗಿ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆಯೂ ತಿಳಿಸಲಾಯಿತು.

ಕೆ ಇ ಜಯರಾಮ್ ಯೋಜನ ನಿರ್ದೇಶಕರು ಮಂಗಳೂರು ಇವರು ಮಾತನಾಡಿ ಸಂಜೀವಿನಿ ಒಕ್ಕೂಟಗಳ ಜವಾಬ್ದಾರಿ ಮತ್ತು ಮಾಡುತ್ತಿರುವ ಕೆಲಸಗಳ ಬಗ್ಗೆ ಮಾತನಾಡಿದರು.

ವಿನೀತ್ ಕೃಷಿ ಜೀವನೋಪಾಯ ಜಿಲ್ಲಾ ಪಂಚಾಯತ್ ಮಂಗಳೂರು ಉಪಸ್ಥಿತರಿದ್ದರು. ರಾಜಣ್ಣ ಕಾರ್ಯನಿರ್ವಹಣಾಧಿಕಾರಿ ತಾಲೂಕು ಪಂಚಾಯಿತಿ ಸುಳ್ಯ ಇವರು ಗೇರು ಗಿಡಗಳ ಮಹತ್ವದ ಕುರಿತು ಮಾಹಿತಿ ನೀಡಿ ಸಖಿಯರು ಉತ್ತಮ ರೀತಿಯಲ್ಲಿ ಹೇಗೆ ಕೆಲಸ ನಿರ್ವಹಿಸಬೇಕು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ತರಬೇತಿಯನ್ನು ವೀಕ್ಷಿಸಿ ನುರಿತ ವಿಜ್ಞಾನಿಗಳ ತಂಡದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ಇಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ, ಕೃಷಿ ಸಖಿಯರು ಇದು ಅತ್ಯುತ್ತಮ ಕಲಿಕೆಯ ಅವಕಾಶವಾಗಿತ್ತು ಮತ್ತು ಸಂಸ್ಥೆಯ ಮಾರ್ಗದರ್ಶನದಲ್ಲಿ ಗೇರು ಕೃಷಿಯನ್ನು ಉತ್ತೇಜಿಸಲು ಕಾತುರರಾಗಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ನ ತಾಲೂಕು ಯೋಜನಾ ಸಂಯೋಜಕಿ  ಶ್ವೇತಾ ತಮ್ಮ ಭಾಷಣದಲ್ಲಿ ಕೃಷಿ ಸಖಿಯರ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿ, ಸಣ್ಣ ಸಂಸ್ಕರಣಾ ಘಟಕಗಳನ್ನು ಅನುಷ್ಠಾನಗೊಳಿಸುವುದು ಕೃಷಿ ಸಖಿಯರಿಗೆ ಹೆಚ್ಚುವರಿ ಆದಾಯದ ಮೂಲವಾಗಲಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

7 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

7 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

7 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

7 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

7 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

17 hours ago