ಕಾಡಿನೊಳಗೆ ಕಾರಿನ ಮನೆ | 18 ವರ್ಷಗಳಿಂದ ಕಾರಿನ ಮನೆಯಲ್ಲಿ ವಾಸ…..! |

October 3, 2021
11:05 PM

ಸುತ್ತಲೂ ಕಾಡು. ಆ ಕಾಡಿನೊಳಗೆ ಕಾರು. ಆ ಕಾರಿನಲ್ಲಿ  ಮನೆ..!, ಆ ಮನೆಯಲ್ಲಿ  ಒಂಟಿ ಬದುಕು….!. ಇಂತಹದ್ದೊಂದು ಅಚ್ಚರಿಯ ಬದುಕು ಕಳೆದ 18  ವರ್ಷಗಳಿಂದ ನಡೆಸುತ್ತಿದ್ದಾರೆ ಚಂದ್ರಶೇಖರ್.‌

Advertisement
Advertisement

ಸುಳ್ಯ ತಾಲೂಕಿನ ಅರಂತೋಡು ಬಳಿಯ ಅಡ್ತಲೆಯ ಬೆದ್ರಪಣೆ ಎಂಬ ಪ್ರದೇಶದಲ್ಲಿ ಕಾಡು ದಾರಿಯ ಪಕ್ಕದಲ್ಲಿ  ಕಾರಿನ ಮನೆಯಲ್ಲಿ  ವಾಸ ಮಾಡುತ್ತಿದ್ದಾರೆ ಚಂದ್ರಶೇಖರ್.‌ ವೃತ್ತಿಯಲ್ಲಿ ಚಾಲಕನಾಗಿದ್ದು ಕೃಷಿಕನೂ ಆಗಿದ್ದ ಚಂದ್ರಶೇಖರ್‌ ಅರಂತೋಡಿನ ಪಕ್ಕದ ಗ್ರಾಮದ ನೆಲ್ಲೂರು ಕೆಮ್ರಾಜೆಯವರು. ಅಲ್ಲಿ ಕೃಷಿ ಭೂಮಿಯನ್ನೂ ಹೊಂದಿದ್ದರು. ಸುಮಾರು  18 ವರ್ಷಗಳ ಹಿಂದೆ ಕೃಷಿ ಭೂಮಿ ಏಲಂ ಆದ ಬಳಿಕ ಈ ಸ್ಥಿತಿಗೆ ಬಂದಿದ್ದಾರೆ.

ನೆಲ್ಲೂರು ಕೆಮ್ರಾಜೆಯಲ್ಲಿ ಕೃಷಿ ಭೂಮಿ ಹೊಂದಿದ್ದ ಚಂದ್ರಶೇಖರ್‌ ಅವರು ಕೃಷಿ ಸಾಲ ಪಡೆದು ಸಾಲ ಮರುಪಾವತಿ ಮಾಡಲಾಗದೆ ಎಂದು ಕೃಷಿ ಭೂಮಿ ಹರಾಜು ನಡೆದಿತ್ತು. ಅದಾದ ಬಳಿಕ ಕಾರೊಂದು ಖರೀದಿ ಮಾಡಿ ಬಾಡಿಗೆ ಮಾಡಿ ಬದುಕು ಸಾಗಿಸುತ್ತಿದ್ದರು. ಕ್ರಮೇಣ ಕಾರು ಹಳೆಯದಾದ್ದರಿಂದ ಆಗಾ ಕೈಕೊಡುತ್ತಿತ್ತು. ಒಂದು ಸಂದರ್ಭ ತನ್ನ ಸಹೋದರಿ ಮನೆ ಇರುವ ಅಡ್ತಲೆ ಬಳಿಯ ಬೆದ್ರಪಣೆಗೆ ಹೋದಾಗ ಕಾರು ಬಾಕಿಯಾಯಿತು. ದುರಸ್ತಿಗೆ ಪ್ರಯತ್ನಿಸಿ ಆಗಿರಲಿಲ್ಲ. ಅದಾದ ಬಳಿಕ ಅದೇ ಕಾರಿನಲ್ಲಿ ವಾಸ ಮಾಡಿದರು. ಕಾರಿನ ಮೇಲೆ ಛಾವಣಿ ಮಾಡಿ ರಸ್ತೆ ಬದಿಯೇ ಕಾರಿನಲ್ಲಿಯೇ ಮಲಗಿ ಅದನ್ನೇ ಮನೆಯಾಗಿಸಿದರು. 18 ವರ್ಷಗಳಿಂದ ಈ ರೀತಿ ಬದುಕು ಸಾಗಿಸುತ್ತಿದ್ದಾರೆ.

Advertisement

ಜೀವನೋಪಾಯಕ್ಕಾಗಿ ಸಮೀಪದ ಕಾಡಿನಿಂದ ಬಳ್ಳಿಗಳನ್ನು ತಂದು ಬುಟ್ಟಿ ಹೆಣೆದು ಸಮೀಪದ ಪೇಟೆಗೆ ಅಥವಾ ಸುಳ್ಯದ ಅಂಗಡಿಗೆ ಸೈಕಲ್‌ ಮೂಲಕ ತೆರಳಿ ಬುಟ್ಟಿ ಮಾರಾಟ ಮಾಡುತ್ತಾರೆ. ಈ ಮೂಲಕ ದಿನಸಿ ಸಾಮಾಗ್ರಿ ತಂದು ತಾವೇ ಅಡುಗೆ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಇದುವರೆಗೆ ಯಾವ ಸಮಸ್ಯೆ ಆಗಿಲ್ಲ, ತನಗೆ ನ್ಯಾಯ ಸಿಗಬೇಕು ಎಂದು ಆಗಾಗ ಮಾತಿನ ನಡುವೆ ಹೇಳುತ್ತಾರೆ. ಕಡಿಮೆ ದರದಲ್ಲಿ ಕಾರು ಸಿಗಬಹುದೇ ಎಂದು ಪ್ರಶ್ನೆ ಮಾಡುವ ಚಂದ್ರಶೇಖರ್‌ , ಭೂಮಿ, ಕಾರು ಬಗ್ಗೆ ಆಗಾಗ ಮಾತನಾಡುತ್ತಾ, ಭೂಮಿ ನನಗೆ ಖರೀದಿ ಮಾಡಬಹುದು, ನನಗೆ ಸರಿಯಾದ ಮೊತ್ತ ಸಿಗಲಿ ಎಂದು ಹೇಳುತ್ತಾರೆ.

 

 

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
June 25, 2025
10:57 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ
 ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ
June 25, 2025
4:12 PM
by: ದ ರೂರಲ್ ಮಿರರ್.ಕಾಂ
ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ
June 25, 2025
4:10 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಪ್ರಮುಖ ಸುದ್ದಿ

MIRROR FOCUS

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
June 25, 2025
10:57 PM
by: The Rural Mirror ಸುದ್ದಿಜಾಲ
ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
June 25, 2025
10:57 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ
 ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ
June 25, 2025
4:12 PM
by: ದ ರೂರಲ್ ಮಿರರ್.ಕಾಂ
ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ
June 25, 2025
4:10 PM
by: The Rural Mirror ಸುದ್ದಿಜಾಲ

Editorial pick

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ
June 26, 2025
6:08 AM
by: ದ ರೂರಲ್ ಮಿರರ್.ಕಾಂ
ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
June 25, 2025
10:57 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ
 ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ
June 25, 2025
4:12 PM
by: ದ ರೂರಲ್ ಮಿರರ್.ಕಾಂ
ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ
June 25, 2025
4:10 PM
by: The Rural Mirror ಸುದ್ದಿಜಾಲ
ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ
June 25, 2025
4:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?
June 25, 2025
2:55 PM
by: ಸಾಯಿಶೇಖರ್ ಕರಿಕಳ
ಒಂದೇ ದಿನ 3,400 ಗುಂಡಿಗಳನ್ನು ಮುಚ್ಚುವ “ವಿಶ್ವ ದಾಖಲೆ”
June 25, 2025
2:34 PM
by: The Rural Mirror ಸುದ್ದಿಜಾಲ
ರಾಜ್ಯದ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ | ಮೊದಲ ಬಾರಿಗೆ ಲಂಡನ್‌ಗೆ ರಫ್ತು
June 25, 2025
11:39 AM
by: The Rural Mirror ಸುದ್ದಿಜಾಲ
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ
June 25, 2025
11:31 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

OPINION

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ
ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror

Join Our Group