Advertisement
MIRROR FOCUS

ಕಾಡಿನೊಳಗೆ ಕಾರಿನ ಮನೆ | 18 ವರ್ಷಗಳಿಂದ ಕಾರಿನ ಮನೆಯಲ್ಲಿ ವಾಸ…..! |

Share

ಸುತ್ತಲೂ ಕಾಡು. ಆ ಕಾಡಿನೊಳಗೆ ಕಾರು. ಆ ಕಾರಿನಲ್ಲಿ  ಮನೆ..!, ಆ ಮನೆಯಲ್ಲಿ  ಒಂಟಿ ಬದುಕು….!. ಇಂತಹದ್ದೊಂದು ಅಚ್ಚರಿಯ ಬದುಕು ಕಳೆದ 18  ವರ್ಷಗಳಿಂದ ನಡೆಸುತ್ತಿದ್ದಾರೆ ಚಂದ್ರಶೇಖರ್.‌

ಸುಳ್ಯ ತಾಲೂಕಿನ ಅರಂತೋಡು ಬಳಿಯ ಅಡ್ತಲೆಯ ಬೆದ್ರಪಣೆ ಎಂಬ ಪ್ರದೇಶದಲ್ಲಿ ಕಾಡು ದಾರಿಯ ಪಕ್ಕದಲ್ಲಿ  ಕಾರಿನ ಮನೆಯಲ್ಲಿ  ವಾಸ ಮಾಡುತ್ತಿದ್ದಾರೆ ಚಂದ್ರಶೇಖರ್.‌ ವೃತ್ತಿಯಲ್ಲಿ ಚಾಲಕನಾಗಿದ್ದು ಕೃಷಿಕನೂ ಆಗಿದ್ದ ಚಂದ್ರಶೇಖರ್‌ ಅರಂತೋಡಿನ ಪಕ್ಕದ ಗ್ರಾಮದ ನೆಲ್ಲೂರು ಕೆಮ್ರಾಜೆಯವರು. ಅಲ್ಲಿ ಕೃಷಿ ಭೂಮಿಯನ್ನೂ ಹೊಂದಿದ್ದರು. ಸುಮಾರು  18 ವರ್ಷಗಳ ಹಿಂದೆ ಕೃಷಿ ಭೂಮಿ ಏಲಂ ಆದ ಬಳಿಕ ಈ ಸ್ಥಿತಿಗೆ ಬಂದಿದ್ದಾರೆ.

ನೆಲ್ಲೂರು ಕೆಮ್ರಾಜೆಯಲ್ಲಿ ಕೃಷಿ ಭೂಮಿ ಹೊಂದಿದ್ದ ಚಂದ್ರಶೇಖರ್‌ ಅವರು ಕೃಷಿ ಸಾಲ ಪಡೆದು ಸಾಲ ಮರುಪಾವತಿ ಮಾಡಲಾಗದೆ ಎಂದು ಕೃಷಿ ಭೂಮಿ ಹರಾಜು ನಡೆದಿತ್ತು. ಅದಾದ ಬಳಿಕ ಕಾರೊಂದು ಖರೀದಿ ಮಾಡಿ ಬಾಡಿಗೆ ಮಾಡಿ ಬದುಕು ಸಾಗಿಸುತ್ತಿದ್ದರು. ಕ್ರಮೇಣ ಕಾರು ಹಳೆಯದಾದ್ದರಿಂದ ಆಗಾ ಕೈಕೊಡುತ್ತಿತ್ತು. ಒಂದು ಸಂದರ್ಭ ತನ್ನ ಸಹೋದರಿ ಮನೆ ಇರುವ ಅಡ್ತಲೆ ಬಳಿಯ ಬೆದ್ರಪಣೆಗೆ ಹೋದಾಗ ಕಾರು ಬಾಕಿಯಾಯಿತು. ದುರಸ್ತಿಗೆ ಪ್ರಯತ್ನಿಸಿ ಆಗಿರಲಿಲ್ಲ. ಅದಾದ ಬಳಿಕ ಅದೇ ಕಾರಿನಲ್ಲಿ ವಾಸ ಮಾಡಿದರು. ಕಾರಿನ ಮೇಲೆ ಛಾವಣಿ ಮಾಡಿ ರಸ್ತೆ ಬದಿಯೇ ಕಾರಿನಲ್ಲಿಯೇ ಮಲಗಿ ಅದನ್ನೇ ಮನೆಯಾಗಿಸಿದರು. 18 ವರ್ಷಗಳಿಂದ ಈ ರೀತಿ ಬದುಕು ಸಾಗಿಸುತ್ತಿದ್ದಾರೆ.

ಜೀವನೋಪಾಯಕ್ಕಾಗಿ ಸಮೀಪದ ಕಾಡಿನಿಂದ ಬಳ್ಳಿಗಳನ್ನು ತಂದು ಬುಟ್ಟಿ ಹೆಣೆದು ಸಮೀಪದ ಪೇಟೆಗೆ ಅಥವಾ ಸುಳ್ಯದ ಅಂಗಡಿಗೆ ಸೈಕಲ್‌ ಮೂಲಕ ತೆರಳಿ ಬುಟ್ಟಿ ಮಾರಾಟ ಮಾಡುತ್ತಾರೆ. ಈ ಮೂಲಕ ದಿನಸಿ ಸಾಮಾಗ್ರಿ ತಂದು ತಾವೇ ಅಡುಗೆ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಇದುವರೆಗೆ ಯಾವ ಸಮಸ್ಯೆ ಆಗಿಲ್ಲ, ತನಗೆ ನ್ಯಾಯ ಸಿಗಬೇಕು ಎಂದು ಆಗಾಗ ಮಾತಿನ ನಡುವೆ ಹೇಳುತ್ತಾರೆ. ಕಡಿಮೆ ದರದಲ್ಲಿ ಕಾರು ಸಿಗಬಹುದೇ ಎಂದು ಪ್ರಶ್ನೆ ಮಾಡುವ ಚಂದ್ರಶೇಖರ್‌ , ಭೂಮಿ, ಕಾರು ಬಗ್ಗೆ ಆಗಾಗ ಮಾತನಾಡುತ್ತಾ, ಭೂಮಿ ನನಗೆ ಖರೀದಿ ಮಾಡಬಹುದು, ನನಗೆ ಸರಿಯಾದ ಮೊತ್ತ ಸಿಗಲಿ ಎಂದು ಹೇಳುತ್ತಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

6 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

18 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

19 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

19 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

20 hours ago