Advertisement
MIRROR FOCUS

ಕಾಡಿನೊಳಗೆ ಕಾರಿನ ಮನೆ | 18 ವರ್ಷಗಳಿಂದ ಕಾರಿನ ಮನೆಯಲ್ಲಿ ವಾಸ…..! |

Share

ಸುತ್ತಲೂ ಕಾಡು. ಆ ಕಾಡಿನೊಳಗೆ ಕಾರು. ಆ ಕಾರಿನಲ್ಲಿ  ಮನೆ..!, ಆ ಮನೆಯಲ್ಲಿ  ಒಂಟಿ ಬದುಕು….!. ಇಂತಹದ್ದೊಂದು ಅಚ್ಚರಿಯ ಬದುಕು ಕಳೆದ 18  ವರ್ಷಗಳಿಂದ ನಡೆಸುತ್ತಿದ್ದಾರೆ ಚಂದ್ರಶೇಖರ್.‌

ಸುಳ್ಯ ತಾಲೂಕಿನ ಅರಂತೋಡು ಬಳಿಯ ಅಡ್ತಲೆಯ ಬೆದ್ರಪಣೆ ಎಂಬ ಪ್ರದೇಶದಲ್ಲಿ ಕಾಡು ದಾರಿಯ ಪಕ್ಕದಲ್ಲಿ  ಕಾರಿನ ಮನೆಯಲ್ಲಿ  ವಾಸ ಮಾಡುತ್ತಿದ್ದಾರೆ ಚಂದ್ರಶೇಖರ್.‌ ವೃತ್ತಿಯಲ್ಲಿ ಚಾಲಕನಾಗಿದ್ದು ಕೃಷಿಕನೂ ಆಗಿದ್ದ ಚಂದ್ರಶೇಖರ್‌ ಅರಂತೋಡಿನ ಪಕ್ಕದ ಗ್ರಾಮದ ನೆಲ್ಲೂರು ಕೆಮ್ರಾಜೆಯವರು. ಅಲ್ಲಿ ಕೃಷಿ ಭೂಮಿಯನ್ನೂ ಹೊಂದಿದ್ದರು. ಸುಮಾರು  18 ವರ್ಷಗಳ ಹಿಂದೆ ಕೃಷಿ ಭೂಮಿ ಏಲಂ ಆದ ಬಳಿಕ ಈ ಸ್ಥಿತಿಗೆ ಬಂದಿದ್ದಾರೆ.

ನೆಲ್ಲೂರು ಕೆಮ್ರಾಜೆಯಲ್ಲಿ ಕೃಷಿ ಭೂಮಿ ಹೊಂದಿದ್ದ ಚಂದ್ರಶೇಖರ್‌ ಅವರು ಕೃಷಿ ಸಾಲ ಪಡೆದು ಸಾಲ ಮರುಪಾವತಿ ಮಾಡಲಾಗದೆ ಎಂದು ಕೃಷಿ ಭೂಮಿ ಹರಾಜು ನಡೆದಿತ್ತು. ಅದಾದ ಬಳಿಕ ಕಾರೊಂದು ಖರೀದಿ ಮಾಡಿ ಬಾಡಿಗೆ ಮಾಡಿ ಬದುಕು ಸಾಗಿಸುತ್ತಿದ್ದರು. ಕ್ರಮೇಣ ಕಾರು ಹಳೆಯದಾದ್ದರಿಂದ ಆಗಾ ಕೈಕೊಡುತ್ತಿತ್ತು. ಒಂದು ಸಂದರ್ಭ ತನ್ನ ಸಹೋದರಿ ಮನೆ ಇರುವ ಅಡ್ತಲೆ ಬಳಿಯ ಬೆದ್ರಪಣೆಗೆ ಹೋದಾಗ ಕಾರು ಬಾಕಿಯಾಯಿತು. ದುರಸ್ತಿಗೆ ಪ್ರಯತ್ನಿಸಿ ಆಗಿರಲಿಲ್ಲ. ಅದಾದ ಬಳಿಕ ಅದೇ ಕಾರಿನಲ್ಲಿ ವಾಸ ಮಾಡಿದರು. ಕಾರಿನ ಮೇಲೆ ಛಾವಣಿ ಮಾಡಿ ರಸ್ತೆ ಬದಿಯೇ ಕಾರಿನಲ್ಲಿಯೇ ಮಲಗಿ ಅದನ್ನೇ ಮನೆಯಾಗಿಸಿದರು. 18 ವರ್ಷಗಳಿಂದ ಈ ರೀತಿ ಬದುಕು ಸಾಗಿಸುತ್ತಿದ್ದಾರೆ.

ಜೀವನೋಪಾಯಕ್ಕಾಗಿ ಸಮೀಪದ ಕಾಡಿನಿಂದ ಬಳ್ಳಿಗಳನ್ನು ತಂದು ಬುಟ್ಟಿ ಹೆಣೆದು ಸಮೀಪದ ಪೇಟೆಗೆ ಅಥವಾ ಸುಳ್ಯದ ಅಂಗಡಿಗೆ ಸೈಕಲ್‌ ಮೂಲಕ ತೆರಳಿ ಬುಟ್ಟಿ ಮಾರಾಟ ಮಾಡುತ್ತಾರೆ. ಈ ಮೂಲಕ ದಿನಸಿ ಸಾಮಾಗ್ರಿ ತಂದು ತಾವೇ ಅಡುಗೆ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಇದುವರೆಗೆ ಯಾವ ಸಮಸ್ಯೆ ಆಗಿಲ್ಲ, ತನಗೆ ನ್ಯಾಯ ಸಿಗಬೇಕು ಎಂದು ಆಗಾಗ ಮಾತಿನ ನಡುವೆ ಹೇಳುತ್ತಾರೆ. ಕಡಿಮೆ ದರದಲ್ಲಿ ಕಾರು ಸಿಗಬಹುದೇ ಎಂದು ಪ್ರಶ್ನೆ ಮಾಡುವ ಚಂದ್ರಶೇಖರ್‌ , ಭೂಮಿ, ಕಾರು ಬಗ್ಗೆ ಆಗಾಗ ಮಾತನಾಡುತ್ತಾ, ಭೂಮಿ ನನಗೆ ಖರೀದಿ ಮಾಡಬಹುದು, ನನಗೆ ಸರಿಯಾದ ಮೊತ್ತ ಸಿಗಲಿ ಎಂದು ಹೇಳುತ್ತಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago