Advertisement
MIRROR FOCUS

ಕಾಡಿನೊಳಗೆ ಕಾರಿನ ಮನೆ | 18 ವರ್ಷಗಳಿಂದ ಕಾರಿನ ಮನೆಯಲ್ಲಿ ವಾಸ…..! |

Share

ಸುತ್ತಲೂ ಕಾಡು. ಆ ಕಾಡಿನೊಳಗೆ ಕಾರು. ಆ ಕಾರಿನಲ್ಲಿ  ಮನೆ..!, ಆ ಮನೆಯಲ್ಲಿ  ಒಂಟಿ ಬದುಕು….!. ಇಂತಹದ್ದೊಂದು ಅಚ್ಚರಿಯ ಬದುಕು ಕಳೆದ 18  ವರ್ಷಗಳಿಂದ ನಡೆಸುತ್ತಿದ್ದಾರೆ ಚಂದ್ರಶೇಖರ್.‌

ಸುಳ್ಯ ತಾಲೂಕಿನ ಅರಂತೋಡು ಬಳಿಯ ಅಡ್ತಲೆಯ ಬೆದ್ರಪಣೆ ಎಂಬ ಪ್ರದೇಶದಲ್ಲಿ ಕಾಡು ದಾರಿಯ ಪಕ್ಕದಲ್ಲಿ  ಕಾರಿನ ಮನೆಯಲ್ಲಿ  ವಾಸ ಮಾಡುತ್ತಿದ್ದಾರೆ ಚಂದ್ರಶೇಖರ್.‌ ವೃತ್ತಿಯಲ್ಲಿ ಚಾಲಕನಾಗಿದ್ದು ಕೃಷಿಕನೂ ಆಗಿದ್ದ ಚಂದ್ರಶೇಖರ್‌ ಅರಂತೋಡಿನ ಪಕ್ಕದ ಗ್ರಾಮದ ನೆಲ್ಲೂರು ಕೆಮ್ರಾಜೆಯವರು. ಅಲ್ಲಿ ಕೃಷಿ ಭೂಮಿಯನ್ನೂ ಹೊಂದಿದ್ದರು. ಸುಮಾರು  18 ವರ್ಷಗಳ ಹಿಂದೆ ಕೃಷಿ ಭೂಮಿ ಏಲಂ ಆದ ಬಳಿಕ ಈ ಸ್ಥಿತಿಗೆ ಬಂದಿದ್ದಾರೆ.

ನೆಲ್ಲೂರು ಕೆಮ್ರಾಜೆಯಲ್ಲಿ ಕೃಷಿ ಭೂಮಿ ಹೊಂದಿದ್ದ ಚಂದ್ರಶೇಖರ್‌ ಅವರು ಕೃಷಿ ಸಾಲ ಪಡೆದು ಸಾಲ ಮರುಪಾವತಿ ಮಾಡಲಾಗದೆ ಎಂದು ಕೃಷಿ ಭೂಮಿ ಹರಾಜು ನಡೆದಿತ್ತು. ಅದಾದ ಬಳಿಕ ಕಾರೊಂದು ಖರೀದಿ ಮಾಡಿ ಬಾಡಿಗೆ ಮಾಡಿ ಬದುಕು ಸಾಗಿಸುತ್ತಿದ್ದರು. ಕ್ರಮೇಣ ಕಾರು ಹಳೆಯದಾದ್ದರಿಂದ ಆಗಾ ಕೈಕೊಡುತ್ತಿತ್ತು. ಒಂದು ಸಂದರ್ಭ ತನ್ನ ಸಹೋದರಿ ಮನೆ ಇರುವ ಅಡ್ತಲೆ ಬಳಿಯ ಬೆದ್ರಪಣೆಗೆ ಹೋದಾಗ ಕಾರು ಬಾಕಿಯಾಯಿತು. ದುರಸ್ತಿಗೆ ಪ್ರಯತ್ನಿಸಿ ಆಗಿರಲಿಲ್ಲ. ಅದಾದ ಬಳಿಕ ಅದೇ ಕಾರಿನಲ್ಲಿ ವಾಸ ಮಾಡಿದರು. ಕಾರಿನ ಮೇಲೆ ಛಾವಣಿ ಮಾಡಿ ರಸ್ತೆ ಬದಿಯೇ ಕಾರಿನಲ್ಲಿಯೇ ಮಲಗಿ ಅದನ್ನೇ ಮನೆಯಾಗಿಸಿದರು. 18 ವರ್ಷಗಳಿಂದ ಈ ರೀತಿ ಬದುಕು ಸಾಗಿಸುತ್ತಿದ್ದಾರೆ.

ಜೀವನೋಪಾಯಕ್ಕಾಗಿ ಸಮೀಪದ ಕಾಡಿನಿಂದ ಬಳ್ಳಿಗಳನ್ನು ತಂದು ಬುಟ್ಟಿ ಹೆಣೆದು ಸಮೀಪದ ಪೇಟೆಗೆ ಅಥವಾ ಸುಳ್ಯದ ಅಂಗಡಿಗೆ ಸೈಕಲ್‌ ಮೂಲಕ ತೆರಳಿ ಬುಟ್ಟಿ ಮಾರಾಟ ಮಾಡುತ್ತಾರೆ. ಈ ಮೂಲಕ ದಿನಸಿ ಸಾಮಾಗ್ರಿ ತಂದು ತಾವೇ ಅಡುಗೆ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಇದುವರೆಗೆ ಯಾವ ಸಮಸ್ಯೆ ಆಗಿಲ್ಲ, ತನಗೆ ನ್ಯಾಯ ಸಿಗಬೇಕು ಎಂದು ಆಗಾಗ ಮಾತಿನ ನಡುವೆ ಹೇಳುತ್ತಾರೆ. ಕಡಿಮೆ ದರದಲ್ಲಿ ಕಾರು ಸಿಗಬಹುದೇ ಎಂದು ಪ್ರಶ್ನೆ ಮಾಡುವ ಚಂದ್ರಶೇಖರ್‌ , ಭೂಮಿ, ಕಾರು ಬಗ್ಗೆ ಆಗಾಗ ಮಾತನಾಡುತ್ತಾ, ಭೂಮಿ ನನಗೆ ಖರೀದಿ ಮಾಡಬಹುದು, ನನಗೆ ಸರಿಯಾದ ಮೊತ್ತ ಸಿಗಲಿ ಎಂದು ಹೇಳುತ್ತಾರೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

6 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

7 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

16 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago