ಅಡಿಕೆ ಧಾರಣೆ ಕುಸಿತದ ಭೀತಿಯಲ್ಲಿರುವ ಅಡಿಕೆ ಬೆಳೆಗಾರರಿಗೆ ಈಗ ಹೊಸ ಸಂಗತಿಯೊಂದು ತೆರೆದುಕೊಂಡಿದೆ.ಈ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸಲಿದ್ದಾರೆ. ಅಡಿಕೆ, ತೆಂಗು ಮರದಲ್ಲಿ ಸಂಗ್ರಹವಾಗುವ ಕಾರ್ಬನ್ ಮಾರಾಟದಿಂದ ಆದಾಯ ಪಡೆಯುವ ಬಗ್ಗೆ ಚಿಂತನೆ ನಡೆಯುತ್ತಿದೆ.
ಕಾರ್ಬನ್ ಸೀಕ್ವೆಸ್ಟ್ರೇಶನ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕ ಡಾ.ಕೆ.ಬಾಲಚಂದ್ರ ಹೆಬ್ಬಾರ್ ಅವರು ಮಾಹಿತಿ ನೀಡಿದ್ದಾರೆ. ವಿಟ್ಲದ ಸಿಪಿಸಿಆರ್ಐ ವಠಾರದಲ್ಲಿ ನಡೆದ ರೈತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಅಡಿಕೆ ಧಾರಣೆ ಕುಸಿತ, ಅಸ್ಥಿರತೆಯ ಬಗ್ಗೆ ಚರ್ಚೆ ಆಗುತ್ತಿದೆ. ಅಡಿಕೆಯ ಪರ್ಯಾಯದ ಬಗ್ಗೆಯೂ ಸಾಕಷ್ಟು ಚಿಂತನೆ ನಡೆಯುತ್ತಿದೆ. ಈ ನಡುವೆಯೇ ಇದೀಗ ಕಾರ್ಬನ್ ಸೀಕ್ವೆಸ್ಟ್ರೇಶನ್ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಅಡಿಕೆ ಹಾಗೂ ತೆಂಗು ಬೆಳೆಗಾರರಿಗೆ ಇದು ವರವಾಗಬಹುದು. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ ಎಂದು ಅವರು ಹೇಳಿದರು.
ಇಂದು ಇಡೀ ಪ್ರಪಂಚದಲ್ಲಿ ಹವಾಮಾನದ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಕಾರ್ಬನ್ ಡೈ ಆಕ್ಸೈಡ್. ಬೇರೆ ಬೇರೆ ಕಂಪನಿಗಳಿಂದ ಹೊರಸೂಸುವ ಕಾರ್ಬನ್ ಡೈ ಆಕ್ಸೈಡ್ ವಾತಾವರಣದಿಂದ ತೆಗೆಯುವ ಕೆಲಸ ಆಗಬೇಕಿದೆ. ಅದಕ್ಕಾಗಿ ಗಿಡ, ಮರಗಳೇ ಮುಖ್ಯವಾಗುತ್ತದೆ. ಅಡಿಕೆ ಹಾಗೂ ತೆಂಗು ಹೆಚ್ಚಾಗಿ ಬೆಳೆಯುವ ಪ್ರದೇಶದಲ್ಲಿ ಈ ಬಗ್ಗೆ ಅಧ್ಯಯನ ಆಗುತ್ತಿದೆ. ಅಡಿಕೆ-ತೆಂಗು ಸುಮಾರು 50 ವರ್ಷ ಬದುಕುತ್ತವೆ. ಈ ಸಂದರ್ಭದಲ್ಲಿ ಗಿಡಗಳು ಕಾಂಡದಲ್ಲಿ ಸಂಗ್ರಹಿಸುವ ಕಾರ್ಬನ್ ಬಗ್ಗೆ ಅಧ್ಯಯನ ಆಗುತ್ತಿದೆ. ಈ ಕಾರ್ಬನ್ ಹಣ ಕೊಟ್ಟು ಖರೀದಿ ಮಾಡುವ ದಿನಗಳು ಬರಲಿವೆ. ಅಂದರೆ ಕಾರ್ಬನ್ ಕ್ರೆಡಿಟ್ ಅಗತ್ಯವಾಗಿ ಬೇಕಾಗಲಿದೆ. ಇದಕ್ಕಾಗಿ ಅಡಿಕೆ , ತೆಂಗು ಎಷ್ಟು ಕಾರ್ಬನ್ ಸಂಗ್ರಹ ಮಾಡುತ್ತದೆ ಹಾಗೂ ಕೃಷಿಕರಿಗೆ ಯಾವ ರೀತಿಯಲ್ಲಿ ಪ್ರಯೋಜನವಾಗಬಹುದು, ಯಾವ ರೀತಿ ಮಾರಾಟ ಮಾಡಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಯುತ್ತಿದೆ, ಒಂದು ವೇಳೆ ಎಲ್ಲವೂ ಸರಿಯಾಗಿ ನಡೆದರೆ ಚಿನ್ನಕ್ಕಿಂತಲೂ ಅಧಿಕ ಧಾರಣೆ ಸಿಗಬಹುದು ಎಂದು ಡಾ.ಬಾಲಚಂದ್ರ ಹೆಬ್ಬಾರ್ ಹೇಳಿದರು.
ಕಾರ್ಬನ್ ಸೀಕ್ವೆಸ್ಟ್ರೇಶನ್ ಎನ್ನುವುದು ವಾತಾವರಣದಿಂದ ಇಂಗಾಲದ ಡೈಆಕ್ಸೈಡ್ ತೆಗೆದುಹಾಕುವ ಪ್ರಕ್ರಿಯೆ ಮತ್ತು ಅದನ್ನು ಸಂಗ್ರಹಿಸುವುದು. ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟಕ್ಕೆ ಕಾರ್ಬನ್ ಸೀಕ್ವೆಸ್ಟ್ರೇಶನ್ ಅತ್ಯಗತ್ಯ ಎಂದು ಗುರುತಿಸಲ್ಪಟ್ಟಿದೆ. ಹವಾಮಾನ ಬದಲಾವಣೆಯ ವಿರುದ್ಧ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಇಂಗಾಲದ ಡೈಆಕ್ಸೈಡ್ ಮಟ್ಟಗಳು ಮತ್ತು ಪರಿಣಾಮವಾಗಿ ಉಂಟಾಗುವ ಪರಿಸರ ಪರಿಣಾಮಗಳ ವಿರುದ್ಧದ ಹೋರಾಟದಲ್ಲಿ ಕಾರ್ಬನ್ ಸೀಕ್ವೆಸ್ಟ್ರೇಶನ್ ಬಹುಮುಖ್ಯವಾಗಿ ಈಗ ಕಾಣಿಸಿಕೊಂಡಿದೆ. ನೈಸರ್ಗಿಕ ವ್ಯವಸ್ಥೆಗಳಿಗೆ ಇಲ್ಲಿ ಹೆಚ್ಚಿನ ಆದ್ಯತೆ ಇದೆ.
Carbon sequestration is the process of capturing and storing atmospheric carbon dioxide. It is one method of reducing the amount of carbon dioxide in the atmosphere with the goal of reducing global climate change.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…