Advertisement
Opinion

ಹೃದಯ-ಶ್ವಾಸ ಪ್ರಚೋದನೆ ಕ್ರಿಯೆ | ಆಸ್ಪತ್ರೆಯಲ್ಲಿ ಹೃದಯ ಬಡಿತ ನಿಂತುಹೋದ ರೋಗಿಯ ಎದೆಯನ್ನು ವೈದ್ಯರು ಪದೇ ಪದೇ ಏಕೆ ಒತ್ತುತ್ತಾರೆ?

Share

ಇದನ್ನು ನೀವು ಆಸ್ಪತ್ರೆಯಲ್ಲಿ(Hospital) ನೋಡಿರದಿದ್ದರೂ ಸಿನಿಮಾದಲ್ಲಿ(Cinema) ಖಂಡಿತಾ ನೋಡಿರುತ್ತೀರಿ. ಹೃದಯವು(Heart) ಹೇಗೆ ಕೆಲಸ ಮಾಡುತ್ತದೆ ಎಂದು ನಿಮಗೆ ತಿಳಿದಿದೆ. ಪಂಪ್‌ನಂತೆ, ಹೃದಯವು ದೇಹದಾದ್ಯಂತ ಒತ್ತಡದಲ್ಲಿ ರಕ್ತವನ್ನು(Blood) ಚಲಿಸುವಂತೆ ಮಾಡುತ್ತದೆ. ಒಂದು ನಿಮಿಷದಲ್ಲಿ, ಹೃದಯವು 72 ಬಾರಿ ಸಂಕುಚಿತಗೊಳ್ಳುತ್ತದೆ. ಸಂಕೋಚನವನ್ನು ಸೃಷ್ಟಿಸುವ ಮತ್ತು ಹರಡುವ ಪ್ರಚೋದನೆಯು ಹೃದಯ ಸ್ನಾಯುವಿನ (ಪೇಸ್‌ಮೇಕರ್ ಅಥವಾ ಸೈನೋ-ಹೃತ್ಕರ್ಣದ ನೋಡ್) ಪ್ರಚೋದನೆಯ ಮೂಲದಿಂದ ಬರುತ್ತದೆ.

ಸಂಕೇತಗಳನ್ನು ಸೃಷ್ಟಿಸುವ ಈ ನೋಡ್ ಕೆಟ್ಟು ಅದರ ಕಾರ್ಯ ನಿಂತು ಹೋದರೆ ಹೃದಯವು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ. ಕೆಲವೊಮ್ಮೆ ಹೃದಯ ಸ್ನಾಯುಗಳಿಗೆ ರಕ್ತವನ್ನು ಪೂರೈಸುವ ನಾಳಗಳಲ್ಲಿನ ಅಸಮರ್ಪಕ ಕಾರ್ಯದಿಂದಾಗಿ, ಹೃದಯವು ಪೋಷಕಾಂಶಗಳಿಂದ ವಂಚಿತವಾಗುತ್ತದೆ ಮತ್ತು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ. ಹೃದಯದ ಪ್ರಚೋದನೆಯ ಮೂಲದ ಕಾರ್ಯವು ಎಲೆಕ್ಟ್ರೋಕೆಮಿಕಲ್ ಪ್ರಕ್ರಿಯೆಗಳ ಮೇಲೆ ಅವಲಂಬಿತವಾಗಿರುತ್ತದೆ. ನಿಲ್ಲಿಸಿದ ಹೃದಯವನ್ನು ಮರುಪ್ರಾರಂಭಿಸಲು ಹೊಸ ಪೇಸ್‌ಮೇಕರ್ ಅಥವಾ ಸ್ಫೂರ್ತಿಯ ಮೂಲವನ್ನು ಶಸ್ತ್ರಚಿಕಿತ್ಸೆಯ ಮೂಲಕ ಅಳವಡಿಸಬೇಕು. ಕೆಲವೊಮ್ಮೆ ವಿದ್ಯುತ್ ಆಘಾತ ನೀಡಿ ಹೃದಯವನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತದೆ.

ಎದೆಯ ಮೇಲೆ ಕೈಯಿಂದ ಬಲವಾಗಿ ಒತ್ತಿದಾಗ, ಹೃದಯದ ಮೇಲೆ ಒತ್ತಡ ಬರುತ್ತದೆ ಮತ್ತು ಅದು ಸಂಕುಚಿತಗೊಳ್ಳುತ್ತದೆ. ಇದರಿಂದ ದೇಹದಲ್ಲಿ ರಕ್ತವು ಹರಿಯುತ್ತದೆ. ಈ ರೀತಿಯ ಪುನರಾವರ್ತಿತ ಸಂಕೋಚನಗಳು ಕೆಲವೊಮ್ಮೆ ಸ್ಥಗಿತಗೊಂಡ ಹೃದಯವನ್ನು ಮರುಪ್ರಾರಂಭಿಸಬಹುದು. ಮುಖ್ಯ ವಿಷಯವೆಂದರೆ ಈ ಚಿಕಿತ್ಸೆಯನ್ನು ಎಲ್ಲಿ ಬೇಕಾದರೂ ಮಾಡಬಹುದು. ಏಕೆಂದರೆ, ಇದನ್ನು ಮಾಡಲು ಯಾವುದೇ ಉಪಕರಣಗಳು ಅಥವಾ ಔಷಧಿಗಳ ಅಗತ್ಯವಿಲ್ಲ.

ಡಾ. ಅಂಜಲಿ ದೀಕ್ಷಿತ್ ಮತ್ತು ಡಾ. ಜಗನ್ನಾಥ ದೀಕ್ಷಿತರ ಪುಸ್ತಕದಿಂದ ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

20 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago