Advertisement
ಸುದ್ದಿಗಳು

ಎರಡು ಪ್ಯಾಕೆಟ್ ಅಡಿಕೆ‌ ಹುಡಿ ಸಾಗಾಟ | ಟರ್ಕಿಯಲ್ಲಿ ಬಂಧನವಾಗಿದ್ದ ಪಾಕಿಸ್ತಾನಿ ಪ್ರಜೆ ಬಿಡುಗಡೆ | ಟರ್ಕಿಗೆ ಅಡಿಕೆ-ಸುಪಾರಿ ಸಾಗಾಟ ಶಾಶ್ವತವಾಗಿ ನಿಷೇಧ…! |

Share

ತನ್ನ ಪ್ರವಾಸದ ಸಂದರ್ಭ ಮಿತ್ರರಿಗೆ ಉಡುಗೊರೆಯಾಗಿ ಅಡಿಕೆ ಪ್ಯಾಕೆಟ್‌ ಸಾಗಾಟ ಮಾಡಿದ ಆರೋಪದ ಮೇಲೆ ಟರ್ಕಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕಿಸ್ತಾನದ ಲಾಹೋರ್‌ನ 26 ವರ್ಷದ ನಿವಾಸಿ ಮುಹಮ್ಮದ್ ಅವೈಸ್ ಬಿಡುಗಡೆಯ ಜೊತೆಗೆ ಟರ್ಕಿಗೆ ಅಡಿಕೆಯನ್ನು ಶಾಶ್ವತವಾಗಿ ಸಾಗಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.

Advertisement

ಪಾಕಿಸ್ತಾನದ ಮುಹಮ್ಮದ್ ಅವೈಸ್ ತನ್ನ ಪ್ರವಾಸದ ವೇಳೆ ಮಿತ್ರರಿಗೆ ಎರಡು ಅಡಿಕೆ ಪ್ಯಾಕೆಟ್‌ ಸಾಗಾಟ ಮಾಡುತ್ತಿದ್ದ. ಈ ಸಂದರ್ಭ ಟರ್ಕಿಯಲ್ಲಿ ವಿಮಾನ ಇಳಿಯುತ್ತಿದ್ದಂತೆ ನಾಗರಿಕ ವಿಮಾನಯಾನ ಪ್ರಾಧಿಕಾರದ ತಪಾಸಣೆಯ ವೇಳೆ ಸಿಕ್ಕಿಹಾಕಿಕೊಂಡು ಬಂಧಿಸಲ್ಪಟ್ಟಿದ್ದ. ಪಾಕಿಸ್ತಾನದಲ್ಲಿ ಅಡಿಕೆ ನಿಷೇಧ ಇಲ್ಲ, ಆದರೆ ಟರ್ಕಿಯಲ್ಲಿ ಅಡಿಕೆಯು ಮಾದಕವಸ್ತು/ಡ್ರಗ್ಸ್ ವರ್ಗದ ಅಡಿಯಲ್ಲಿ ಬರುತ್ತದೆ. ಹೀಗಾಗಿ ಅಡಿಕೆ ಸಾಗಾಟ,ಬಳಕೆ ನಿಷೇಧವಾಗಿತ್ತು. ಈ ಬಗ್ಗೆ ಅರಿವು ಇರದ ಪಾಕಿಸ್ತಾನದ ಪ್ರಜೆ ಅಡಿಕೆ ಸಾಗಾಟ ಮಾಡಿದ್ದ. ದೇಶದ ಕಾನೂನು ಪ್ರಕಾರ ಟರ್ಕಿಯಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದರು.

ಬಳಿಕ ಇಸ್ತಾನ್‌ಬುಲ್‌ನಲ್ಲಿರುವ ಪಾಕಿಸ್ತಾನಿ ದೂತಾವಾಸದ ಸತತ ಪ್ರಯತ್ನಗಳ ನಂತರ, ಇಸ್ತಾನ್‌ಬುಲ್‌ನ ಸ್ಥಳೀಯ ನ್ಯಾಯಾಲಯವು  ಬಂಧನದಲ್ಲಿರುವ ಪಾಕಿಸ್ತಾನಿ ಪ್ರಜೆಯನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೇ ಮುಂದೆ ಟರ್ಕಿಯಲ್ಲಿ ಅಡಿಕೆ ಸಾಗಾಟ, ಬಳಕೆ ಮಾಡದಂತೆ ಪಾಕಿಸ್ತಾನಿ ಪ್ರಜೆಗೆ ಎಚ್ಚರಿಕೆ ನೀಡಿ ಶಾಶ್ವತವಾಗಿ ಅಡಿಕೆ ಸಾಗಾಟವನ್ನು ನಿಷೇಧ ಮಾಡಿದೆ.

ಕೆಲವು ದೇಶಗಳಲ್ಲಿ ಅಡಿಕೆ ಬಳಕೆ ಹಾಗೂ ಸಾಗಾಟಕ್ಕೆ ನಿರ್ಬಂಧ ಇದೆ. ದೇಶದ ಕಾನೂನು ಪ್ರಕಾರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಡಿಕೆ ಪತ್ತೆಯಾದರೆ ಬಂಧಿಸಲಾಗುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌

ಸಂಸದ ಬ್ರಿಜೇಶ್‌ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…

13 hours ago

ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು

ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…

13 hours ago

ಬೆಂಬಲ ಬೆಲೆಯಲ್ಲಿ ಬಿಳಿ ಜೋಳ ಖರೀದಿ : ಬಳ್ಳಾರಿ ರೈತರಿಗೆ ನೋಂದಣಿ ಕರೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…

13 hours ago

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…

13 hours ago

ಕರ್ನಾಟಕದ ಜಿಐ ಉತ್ಪನ್ನಗಳ ರಫ್ತು | APEDAಗೆ ಪಿಯೂಷ್ ಗೋಯಲ್ ಶ್ಲಾಘನೆ

ಕರ್ನಾಟಕದ ಜಿಐ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ರಫ್ತು; ಭಾರತದ ಕೃಷಿ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ‘ಪ್ಯಾನಿಕ್ ಸೆಲ್ಲಿಂಗ್’ | ಬೆಳೆಗಾರರೇ, ಗಾಬರಿ ಬೇಡ — ಎಚ್ಚರವಿರಲಿ!

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡ ತಕ್ಷಣ ಉಂಟಾಗುವ ‘ಪ್ಯಾನಿಕ್ ಸೆಲ್ಲಿಂಗ್’ ರೈತರಿಗೆ…

13 hours ago