Advertisement
ಸುದ್ದಿಗಳು

ಎರಡು ಪ್ಯಾಕೆಟ್ ಅಡಿಕೆ‌ ಹುಡಿ ಸಾಗಾಟ | ಟರ್ಕಿಯಲ್ಲಿ ಬಂಧನವಾಗಿದ್ದ ಪಾಕಿಸ್ತಾನಿ ಪ್ರಜೆ ಬಿಡುಗಡೆ | ಟರ್ಕಿಗೆ ಅಡಿಕೆ-ಸುಪಾರಿ ಸಾಗಾಟ ಶಾಶ್ವತವಾಗಿ ನಿಷೇಧ…! |

Share

ತನ್ನ ಪ್ರವಾಸದ ಸಂದರ್ಭ ಮಿತ್ರರಿಗೆ ಉಡುಗೊರೆಯಾಗಿ ಅಡಿಕೆ ಪ್ಯಾಕೆಟ್‌ ಸಾಗಾಟ ಮಾಡಿದ ಆರೋಪದ ಮೇಲೆ ಟರ್ಕಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕಿಸ್ತಾನದ ಲಾಹೋರ್‌ನ 26 ವರ್ಷದ ನಿವಾಸಿ ಮುಹಮ್ಮದ್ ಅವೈಸ್ ಬಿಡುಗಡೆಯ ಜೊತೆಗೆ ಟರ್ಕಿಗೆ ಅಡಿಕೆಯನ್ನು ಶಾಶ್ವತವಾಗಿ ಸಾಗಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.

ಪಾಕಿಸ್ತಾನದ ಮುಹಮ್ಮದ್ ಅವೈಸ್ ತನ್ನ ಪ್ರವಾಸದ ವೇಳೆ ಮಿತ್ರರಿಗೆ ಎರಡು ಅಡಿಕೆ ಪ್ಯಾಕೆಟ್‌ ಸಾಗಾಟ ಮಾಡುತ್ತಿದ್ದ. ಈ ಸಂದರ್ಭ ಟರ್ಕಿಯಲ್ಲಿ ವಿಮಾನ ಇಳಿಯುತ್ತಿದ್ದಂತೆ ನಾಗರಿಕ ವಿಮಾನಯಾನ ಪ್ರಾಧಿಕಾರದ ತಪಾಸಣೆಯ ವೇಳೆ ಸಿಕ್ಕಿಹಾಕಿಕೊಂಡು ಬಂಧಿಸಲ್ಪಟ್ಟಿದ್ದ. ಪಾಕಿಸ್ತಾನದಲ್ಲಿ ಅಡಿಕೆ ನಿಷೇಧ ಇಲ್ಲ, ಆದರೆ ಟರ್ಕಿಯಲ್ಲಿ ಅಡಿಕೆಯು ಮಾದಕವಸ್ತು/ಡ್ರಗ್ಸ್ ವರ್ಗದ ಅಡಿಯಲ್ಲಿ ಬರುತ್ತದೆ. ಹೀಗಾಗಿ ಅಡಿಕೆ ಸಾಗಾಟ,ಬಳಕೆ ನಿಷೇಧವಾಗಿತ್ತು. ಈ ಬಗ್ಗೆ ಅರಿವು ಇರದ ಪಾಕಿಸ್ತಾನದ ಪ್ರಜೆ ಅಡಿಕೆ ಸಾಗಾಟ ಮಾಡಿದ್ದ. ದೇಶದ ಕಾನೂನು ಪ್ರಕಾರ ಟರ್ಕಿಯಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದರು.

ಬಳಿಕ ಇಸ್ತಾನ್‌ಬುಲ್‌ನಲ್ಲಿರುವ ಪಾಕಿಸ್ತಾನಿ ದೂತಾವಾಸದ ಸತತ ಪ್ರಯತ್ನಗಳ ನಂತರ, ಇಸ್ತಾನ್‌ಬುಲ್‌ನ ಸ್ಥಳೀಯ ನ್ಯಾಯಾಲಯವು  ಬಂಧನದಲ್ಲಿರುವ ಪಾಕಿಸ್ತಾನಿ ಪ್ರಜೆಯನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೇ ಮುಂದೆ ಟರ್ಕಿಯಲ್ಲಿ ಅಡಿಕೆ ಸಾಗಾಟ, ಬಳಕೆ ಮಾಡದಂತೆ ಪಾಕಿಸ್ತಾನಿ ಪ್ರಜೆಗೆ ಎಚ್ಚರಿಕೆ ನೀಡಿ ಶಾಶ್ವತವಾಗಿ ಅಡಿಕೆ ಸಾಗಾಟವನ್ನು ನಿಷೇಧ ಮಾಡಿದೆ.

ಕೆಲವು ದೇಶಗಳಲ್ಲಿ ಅಡಿಕೆ ಬಳಕೆ ಹಾಗೂ ಸಾಗಾಟಕ್ಕೆ ನಿರ್ಬಂಧ ಇದೆ. ದೇಶದ ಕಾನೂನು ಪ್ರಕಾರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಡಿಕೆ ಪತ್ತೆಯಾದರೆ ಬಂಧಿಸಲಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago