ತನ್ನ ಪ್ರವಾಸದ ಸಂದರ್ಭ ಮಿತ್ರರಿಗೆ ಉಡುಗೊರೆಯಾಗಿ ಅಡಿಕೆ ಪ್ಯಾಕೆಟ್ ಸಾಗಾಟ ಮಾಡಿದ ಆರೋಪದ ಮೇಲೆ ಟರ್ಕಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕಿಸ್ತಾನದ ಲಾಹೋರ್ನ 26 ವರ್ಷದ ನಿವಾಸಿ ಮುಹಮ್ಮದ್ ಅವೈಸ್ ಬಿಡುಗಡೆಯ ಜೊತೆಗೆ ಟರ್ಕಿಗೆ ಅಡಿಕೆಯನ್ನು ಶಾಶ್ವತವಾಗಿ ಸಾಗಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.
ಪಾಕಿಸ್ತಾನದ ಮುಹಮ್ಮದ್ ಅವೈಸ್ ತನ್ನ ಪ್ರವಾಸದ ವೇಳೆ ಮಿತ್ರರಿಗೆ ಎರಡು ಅಡಿಕೆ ಪ್ಯಾಕೆಟ್ ಸಾಗಾಟ ಮಾಡುತ್ತಿದ್ದ. ಈ ಸಂದರ್ಭ ಟರ್ಕಿಯಲ್ಲಿ ವಿಮಾನ ಇಳಿಯುತ್ತಿದ್ದಂತೆ ನಾಗರಿಕ ವಿಮಾನಯಾನ ಪ್ರಾಧಿಕಾರದ ತಪಾಸಣೆಯ ವೇಳೆ ಸಿಕ್ಕಿಹಾಕಿಕೊಂಡು ಬಂಧಿಸಲ್ಪಟ್ಟಿದ್ದ. ಪಾಕಿಸ್ತಾನದಲ್ಲಿ ಅಡಿಕೆ ನಿಷೇಧ ಇಲ್ಲ, ಆದರೆ ಟರ್ಕಿಯಲ್ಲಿ ಅಡಿಕೆಯು ಮಾದಕವಸ್ತು/ಡ್ರಗ್ಸ್ ವರ್ಗದ ಅಡಿಯಲ್ಲಿ ಬರುತ್ತದೆ. ಹೀಗಾಗಿ ಅಡಿಕೆ ಸಾಗಾಟ,ಬಳಕೆ ನಿಷೇಧವಾಗಿತ್ತು. ಈ ಬಗ್ಗೆ ಅರಿವು ಇರದ ಪಾಕಿಸ್ತಾನದ ಪ್ರಜೆ ಅಡಿಕೆ ಸಾಗಾಟ ಮಾಡಿದ್ದ. ದೇಶದ ಕಾನೂನು ಪ್ರಕಾರ ಟರ್ಕಿಯಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದರು.
ಬಳಿಕ ಇಸ್ತಾನ್ಬುಲ್ನಲ್ಲಿರುವ ಪಾಕಿಸ್ತಾನಿ ದೂತಾವಾಸದ ಸತತ ಪ್ರಯತ್ನಗಳ ನಂತರ, ಇಸ್ತಾನ್ಬುಲ್ನ ಸ್ಥಳೀಯ ನ್ಯಾಯಾಲಯವು ಬಂಧನದಲ್ಲಿರುವ ಪಾಕಿಸ್ತಾನಿ ಪ್ರಜೆಯನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೇ ಮುಂದೆ ಟರ್ಕಿಯಲ್ಲಿ ಅಡಿಕೆ ಸಾಗಾಟ, ಬಳಕೆ ಮಾಡದಂತೆ ಪಾಕಿಸ್ತಾನಿ ಪ್ರಜೆಗೆ ಎಚ್ಚರಿಕೆ ನೀಡಿ ಶಾಶ್ವತವಾಗಿ ಅಡಿಕೆ ಸಾಗಾಟವನ್ನು ನಿಷೇಧ ಮಾಡಿದೆ.
ಕೆಲವು ದೇಶಗಳಲ್ಲಿ ಅಡಿಕೆ ಬಳಕೆ ಹಾಗೂ ಸಾಗಾಟಕ್ಕೆ ನಿರ್ಬಂಧ ಇದೆ. ದೇಶದ ಕಾನೂನು ಪ್ರಕಾರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಡಿಕೆ ಪತ್ತೆಯಾದರೆ ಬಂಧಿಸಲಾಗುತ್ತದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…