Advertisement
Exclusive - Mirror Hunt

ಸುಳ್ಯದಲ್ಲಿ ಸಂಚಲನ ಮೂಡಿಸಿದ ಗ್ರಾಮೀಣ ಪರಿಸ್ಥಿತಿ | ಗಾಯಗೊಂಡ ಮಹಿಳೆಯನ್ನು ಹೊತ್ತುಕೊಂಡು ಹೊಳೆಯಲ್ಲಿ ಸಾಗಿಸುವ ದಯನೀಯ ಸ್ಥಿತಿ….! |

Share

ಎಲ್ಲಿದೆ ಆಡಳಿತ ? ಅಭಿವೃದ್ಧಿಯೇ ಮೂಲಮಂತ್ರ ಎನ್ನುವ ಜನಪ್ರತಿನಿಧಿಗಳು ಎಲ್ಲಿದ್ದಾರೆ ? ಗ್ರಾಮೀಣ ಭಾಗವೇ ಅಭಿವೃದ್ಧಿ ಎನ್ನುವ ಘೋಷಣೆಗಳು ಎಲ್ಲಿವೆ ? ಇಂತಹ ಪ್ರಶ್ನೆಗಳು ಈಗ ಸುಳ್ಯದಲ್ಲಿ  ಹೆಚ್ಚಾಗಿದೆ. ಕಾರಣ ಇಷ್ಟೇ, ಈಗ ಅಭಿವೃದ್ಧಿಗಳ ಪ್ರತಿಫಲನ ಆರಂಭವಾಗಿದೆ. ಇದೀಗ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮರಸಂಕ ಪ್ರದೇಶದ ದಯನೀಯ ಸ್ಥಿತಿ ಬೆಳಕಿಗೆ ಬಂದಿದೆ. ಇದರ ಸ್ಟೋರಿ ಇಲ್ಲಿದೆ.

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಪಂ ವ್ಯಾಪ್ತಿಯ ಮರಸಂಕ ಎಂಬಲ್ಲಿ ಮಹಿಳೆಯೊಬ್ಬರಿಗೆ ಅನಾರೋಗ್ಯ ಕಂಡುಬಂದಾಗ ಆಸ್ಪತ್ರೆಗೆ ಸಾಗಿಸಲು ಹೊಳೆಯಲ್ಲಿ  ಸ್ಟ್ರೆಚರ್‌ ಮೂಲಕ ಸಾಗಾಟ ಮಾಡುವ ವಿಡಿಯೋ ಹಾಗೂ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು , ಅತ್ಯಂತ ದಯನೀಯ ಸ್ಥಿತಿಯ ದರ್ಶನವಾಗಿದೆ. ಸಚಿವ ಎಸ್‌ ಅಂಗಾರ ಅವರ ತವರು ಕ್ಷೇತ್ರದಲ್ಲಿ  ಈ ದೃಶ್ಯ ಕಂಡುಬಂದಿರುವುದು ದುರಂತವಾಗಿದೆ. ಕಳೆದ  25 ವರ್ಷಗಳಿಂದ ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ  ಇಂತಹದ್ದೊಂದು ಸಮಸ್ಯೆ ಇದ್ದೂ ಪರಿಹಾರ ಆಗದೇ ಇರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. 

ಜಾಲ್ಸೂರು ಗ್ರಾಮದ ಮರಸಂಕ ಪ್ರದೇಶದಲ್ಲಿ  ಸುಮಾರು 9  ಮನೆಗಳು ಇವೆ. ಇಲ್ಲಿನ ಜನರು ಜಾಲ್ಸೂರಿಗೆ ಬರಬೇಕಾದರೆ ಇದೇ ಮರಸಂಕದ ಹೊಳೆ ದಾಟಿ ಬರಬೇಕಾಗಿದೆ. ಆದರೆ ಇಲ್ಲಿ ಸಮರ್ಪಕವಾದ ಸೇತುವೆ ಇಲ್ಲ. ಇಲ್ಲೊಂದು ಕಿಂಡಿಅಣೆಕಟ್ಟು ಸಹಿತವಾದ ದಾರಿ ಇದೆ. ಆದರೆ ಮಳೆಗಾಲದಲ್ಲಿ  ಇದರಲ್ಲಿ  ಪಾಚಿ ಹಿಡಿದ ಸ್ಥಿತಿಯಲ್ಲಿ ದಾಟಿ ಬರಲು ಕಷ್ಟವಾಗುತ್ತದೆ. ಅಲ್ಲದೆ ಮರಸಂಕದಿಂದ ಸ್ವಲ್ಪ ದೂರದಲ್ಲಿ ಈ ಕಿಂಡಿಅಣೆಕಟ್ಟು ಇದೆ, ಮಹಿಳೆಯರಿಗೆ , ಮಕ್ಕಳಿಗೆ, ಅನಾರೋಗ್ಯ ಪೀಡಿತರಿಗೆ ಇಲ್ಲಿ ಹೋಗಲು ಕಷ್ಟವಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ಯಾವುದೇ ವಾಹನಗಳು ಇಲ್ಲಿನ 9  ಮನೆಗಳಿಗೆ ಸಂಪರ್ಕ ಮಾಡುವುದಿಲ್ಲ. ಹೀಗಾಗಿ ತುರ್ತು ಸಂದರ್ಭದಲ್ಲಿ ಸಂಕಷ್ಟ ಎದುರಿಸಬೇಕಾಗಿತ್ತು. ಇದಕ್ಕಾಗಿ ಹಲವು ಬಾರಿ ಜನಪ್ರತಿನಿಧಿಗಳಿಗೆ ಇಲಾಖೆಗಳಿಗೆ ಇಲ್ಲಿನ ಜನರು ಮನವಿ ಮಾಡಿದ್ದರು. ಪ್ರತೀ ಬಾರಿ ಚುನಾವಣೆಯ ಸಂದರ್ಭ ಭರವಸೆಗಳು ಸಿಗುತ್ತವೆ, ಆದರೆ ಅದಾದ ಬಳಿಕ ಭರವಸೆಗಳು ಮರೆಯಾಗುತ್ತವೆ ಎನ್ನುತ್ತಾರೆ ಇಲ್ಲಿನ ಜನ. ಹೀಗಾಗಿ ಈಗ ಭರವಸೆಗಳನ್ನು ಕೇಳಿ ಕೇಳಿ ರೋಸಿ ಹೋಗಿದ್ದಾರೆ ಇಲ್ಲಿನ ಜನ. ಕಳೆದ ಬಾರಿ ಕೂಡಾ ಭರವಸೆ ದೊರೆತು ಕಾಮಗಾರಿ ನಡೆಸಲಾಗುತ್ತದೆ ಎನ್ನುವ ಹೊತ್ತಿಗೆ ಅನುದಾನಗಳು ಸಾಕಾಗದು ಎಂದು ನೆನೆಗುದಿಗೆ ಬಿದ್ದಿತ್ತು. ಸ್ಥಳೀಯ ಪಂಚಾಯತ್‌ನಲ್ಲಿ ಕೂಡಾ ಈ ಬಗ್ಗೆ ಪ್ರಸ್ತಾಪವಾಗಿತ್ತು. ಅನೇಕ ವರ್ಷಗಳಿಂದಲೂ ಈ ಸಮಸ್ಯೆ ಇದೆ. ಆದರೆ ಇದುವರೆಗೂ ಪರಿಹಾರ ಮಾತ್ರಾ ಆಗಿಲ್ಲ.

ಕಳೆದ ಅನೇಕ ವರ್ಷಗಳಿಂದ ನಮಗೊಂದು ಸೇತುವೆ ಮಾಡಿಕೊಡಿ ಎಂದು ಮನವಿ ಮಾಡುತ್ತಲೇ ಇದ್ದೇವೆ, ಆದರೆ ಇದುವರೆಗೂ ಭರವಸೆ ಮಾತ್ರಾ ಸಿಕ್ಕಿದೆ, ಪೂರ್ಣಪ್ರಮಾಣದ ಸೇತುವೆ ಅಗತ್ಯವಿದೆ  ಎನ್ನುತ್ತಾರೆ ಸ್ಥಳೀಯರಾದ ಸತೀಶ್‌ ನಾಯ್ಕ್.‌ 

ಸುಳ್ಯದಲ್ಲಿ  ಅನೇಕ ಕಡೆಗಳಲ್ಲಿ ಈ ರೀತಿಯ ಭರವಸೆಗಳು ಮಾತ್ರಾ ಲಭ್ಯವಾಗುತ್ತಿದೆ. ಪ್ರಧಾನಿಗಳಿಗೆ ಪತ್ರ ಬರೆದರೂ ಇಲ್ಲಿ ಯಾವುದೇ ಫಲಿತಾಂಶಗಳು ಲಭ್ಯವಾಗುತ್ತಿಲ್ಲ. ಸುಳ್ಯದಲ್ಲಿ  ಮಾತ್ರಾ ಹೀಗೇಕೆ ಎಂಬ ಪ್ರಶ್ನೆಗಳು ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಸಚಿವರ ಕ್ಷೇತ್ರದಲ್ಲಿ  ಬೆಟ್ಟದಷ್ಟು ಸಮಸ್ಯೆಗಳಿದ್ದರೂ ಏಕೆ ಸೂಕ್ತ ರೀತಿಯ ಸ್ಪಂದನೆ ಸಿಗುತ್ತಿಲ್ಲ ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

10 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

17 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago