Advertisement
ಸುದ್ದಿಗಳು

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

Share

ದೇಶದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣ, ಜಾಗತಿಕ ಮಟ್ಟಕ್ಕಿಂತಲೂ  ಇಳಿಕೆಯಾಗಿದೆ, ಆದರೆ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ  ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಲೋಕಸಭೆಯಲ್ಲಿ ತಿಳಿಸಿದ್ದಾರೆ. ……… ಮುಂದೆ ಓದಿ…….

Advertisement
Advertisement

ಪ್ರಶ್ನೋತ್ತರ ಅವಧಿಯಲ್ಲಿ ಅವರು, ಮಾತೆಯರು ಮತ್ತು ಮಕ್ಕಳ ಮರಣ ಪ್ರಮಾಣ ತಡೆಗಟ್ಟಲು ಸರ್ಕಾರ, ಬಹು ಆಯಾಮದ ಹಲವು ಯೋಜನೆಗಳ ಮೂಲಕ ಪ್ರಯತ್ನ ನಡೆಸುತ್ತಿದೆ. ಬುಡಕಟ್ಟು ಪ್ರದೇಶದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ದೇಶದಲ್ಲಿ, 61 ಕೋಟಿ ಜನರು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಇದುವರೆಗೆ 8 ಕೋಟಿಗೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಬಡವರ ಆರೋಗ್ಯ ಯೋಜನೆಯಡಿ 1.19 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಯೋಜನೆಯು ಕಿಮೋ ಹಾಗೂ ಬೈಪಾಸ್, ಮಂಡಿ ಸೇರಿದಂತೆ ಸಾವಿರಕ್ಕೂ ಅಧಿಕ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.  ಆಯುಷ್ಮಾನ್ ಯೋಜನೆಯಡಿ, ಹಣ ಬಿಡುಗಡೆಗೆ ಕೇಂದ್ರ ಸರ್ಕಾರದಿಂದ ವಿಳಂಬವಾಗುತ್ತಿಲ್ಲ. ಡಿಜಿಟಲ್ ಮೂಲಕ ಆಸ್ಪತ್ರೆಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಸುಳ್ಳು ಪ್ರಕರಣಗಳ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗಿದ್ದು, ಈ ಸಂಬಂಧ 1 ಸಾವಿರದ 114 ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 122 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

15 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago