Advertisement
ಸುದ್ದಿಗಳು

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

Share

ದೇಶದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣ, ಜಾಗತಿಕ ಮಟ್ಟಕ್ಕಿಂತಲೂ  ಇಳಿಕೆಯಾಗಿದೆ, ಆದರೆ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ  ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಲೋಕಸಭೆಯಲ್ಲಿ ತಿಳಿಸಿದ್ದಾರೆ. ……… ಮುಂದೆ ಓದಿ…….

ಪ್ರಶ್ನೋತ್ತರ ಅವಧಿಯಲ್ಲಿ ಅವರು, ಮಾತೆಯರು ಮತ್ತು ಮಕ್ಕಳ ಮರಣ ಪ್ರಮಾಣ ತಡೆಗಟ್ಟಲು ಸರ್ಕಾರ, ಬಹು ಆಯಾಮದ ಹಲವು ಯೋಜನೆಗಳ ಮೂಲಕ ಪ್ರಯತ್ನ ನಡೆಸುತ್ತಿದೆ. ಬುಡಕಟ್ಟು ಪ್ರದೇಶದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ದೇಶದಲ್ಲಿ, 61 ಕೋಟಿ ಜನರು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಇದುವರೆಗೆ 8 ಕೋಟಿಗೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಬಡವರ ಆರೋಗ್ಯ ಯೋಜನೆಯಡಿ 1.19 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಯೋಜನೆಯು ಕಿಮೋ ಹಾಗೂ ಬೈಪಾಸ್, ಮಂಡಿ ಸೇರಿದಂತೆ ಸಾವಿರಕ್ಕೂ ಅಧಿಕ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.  ಆಯುಷ್ಮಾನ್ ಯೋಜನೆಯಡಿ, ಹಣ ಬಿಡುಗಡೆಗೆ ಕೇಂದ್ರ ಸರ್ಕಾರದಿಂದ ವಿಳಂಬವಾಗುತ್ತಿಲ್ಲ. ಡಿಜಿಟಲ್ ಮೂಲಕ ಆಸ್ಪತ್ರೆಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಸುಳ್ಳು ಪ್ರಕರಣಗಳ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗಿದ್ದು, ಈ ಸಂಬಂಧ 1 ಸಾವಿರದ 114 ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 122 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago