Advertisement
ಸುದ್ದಿಗಳು

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

Share

ದೇಶದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣ, ಜಾಗತಿಕ ಮಟ್ಟಕ್ಕಿಂತಲೂ  ಇಳಿಕೆಯಾಗಿದೆ, ಆದರೆ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ  ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಲೋಕಸಭೆಯಲ್ಲಿ ತಿಳಿಸಿದ್ದಾರೆ. ……… ಮುಂದೆ ಓದಿ…….

ಪ್ರಶ್ನೋತ್ತರ ಅವಧಿಯಲ್ಲಿ ಅವರು, ಮಾತೆಯರು ಮತ್ತು ಮಕ್ಕಳ ಮರಣ ಪ್ರಮಾಣ ತಡೆಗಟ್ಟಲು ಸರ್ಕಾರ, ಬಹು ಆಯಾಮದ ಹಲವು ಯೋಜನೆಗಳ ಮೂಲಕ ಪ್ರಯತ್ನ ನಡೆಸುತ್ತಿದೆ. ಬುಡಕಟ್ಟು ಪ್ರದೇಶದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ದೇಶದಲ್ಲಿ, 61 ಕೋಟಿ ಜನರು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಇದುವರೆಗೆ 8 ಕೋಟಿಗೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಬಡವರ ಆರೋಗ್ಯ ಯೋಜನೆಯಡಿ 1.19 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಯೋಜನೆಯು ಕಿಮೋ ಹಾಗೂ ಬೈಪಾಸ್, ಮಂಡಿ ಸೇರಿದಂತೆ ಸಾವಿರಕ್ಕೂ ಅಧಿಕ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.  ಆಯುಷ್ಮಾನ್ ಯೋಜನೆಯಡಿ, ಹಣ ಬಿಡುಗಡೆಗೆ ಕೇಂದ್ರ ಸರ್ಕಾರದಿಂದ ವಿಳಂಬವಾಗುತ್ತಿಲ್ಲ. ಡಿಜಿಟಲ್ ಮೂಲಕ ಆಸ್ಪತ್ರೆಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಸುಳ್ಳು ಪ್ರಕರಣಗಳ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗಿದ್ದು, ಈ ಸಂಬಂಧ 1 ಸಾವಿರದ 114 ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 122 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago