MIRROR FOCUS

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ | ರೋಗ ನಿರೋಧಕ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿವಮೊಗ್ಗ ಜಿಲ್ಲೆ ಅರಳುಗೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಪರಿಶೀಲನಾ ಸಭೆ ನಡೆಸಿದರು.

Advertisement
Advertisement

ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲೆಯಲ್ಲಿ ಸಾಮಾನ್ಯವಾಗಿ ಚಳಿಗಾಲದ ಸಂದರ್ಭದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಲವು ಸಾವು ಪ್ರಕರಣಗಳು ಸಂಭವಿಸಿವೆ ಎಂದು ಸಚಿವರ ಗಮನಕ್ಕೆ ತಂದರು.

ಮಂಗನ ಕಾಯಿಲೆ ಗುಣಪಡಿಸಬಹುದಾಗಿದ್ದು, ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಮೂಲಕ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಸಚಿವರು, ಮಂಗನ ಕಾಯಿಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೋಗ ನಿರೋಧಕ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದಕ್ಕಾಗಿ ಹೈದರಾಬಾದಿನ ಸಂಸ್ಥೆಯೊಂದಕ್ಕೆ 10 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮಂಗನ ಕಾಯಿಲೆಯಿಂದ ಸಾಕಷ್ಟು ಜನರು ಮೃತಪಟ್ಟಿದ್ದು, ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು,  ಜನರನ್ನು ಮಂಗನಕಾಯಿಲೆ ಭಯದಿಂದ ಹೊರತರಬೇಕಾಗಿದೆ. ಇಲ್ಲಿ ಸೂಕ್ತ ಆಸ್ಪತ್ರೆ, ವೈದ್ಯರು ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು  ಅರಳುಗೋಡು ನಿವಾಸಿಗಳು ಇದೇ ವೇಳೆ ಒತ್ತಾಯಿಸಿದ್ದಾರೆ.

Advertisement

ಏನಿದು ಮಂಗನಕಾಯಿಲೆ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ 1956ರಲ್ಲಿ ಈ ಕಾಯಿಲೆ ಪತ್ತೆ ಆಯಿತು. ಆದ್ದರಿಂದ, ಇದಕ್ಕೆ ಕ್ಯಾಸನೂರು ಕಾಯಿಲೆ ಎಂಬ ಹೆಸರು ಇದೆ. ಮಂಗನಿಂದ ಈ ಕಾಯಿಲೆ ಬರುವುದರಿಂದ ಮಂಗನಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಕಾಡಿನಲ್ಲಿರುವ ಉಣ್ಣೆಗಳು ಕಚ್ಚುವುದರಿಂದ ಮಾತ್ರ ಬರುತ್ತದೆ. ಈ ಕಾಯಿಲೆಯು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಕಾಡಿನಲ್ಲಿ ಮಂಗಗಳು ಸಾಯುವುದೇ ಈ ಕಾಯಿಲೆಯ ಮುನ್ಸೂಚನೆಯಾಗಿದೆ.

ರೋಗದ ಲಕ್ಷಣಗಳು : ಸತತ ಎಂಟು-ಹತ್ತು ದಿನಗಳ ತನಕ ಬಿಡದೇ ಬರುವ ಜ್ವರ ,  ವಿಪರೀತ ತಲೆನೋವು, ಸೋಂಟ ನೋವು, ಕೈಕಾಲು ನೋವು, ನಿಶ್ಯಕ್ತಿ, ಕಣ್ಣು ಕೆಂಪಾಗುವುದು , ಜ್ವರ ಬಂದ 2 ವಾರದ ನಂತರ ಮೂಗು, ಬಾಯಿ, ಗುದದ್ವಾರದಿಂದ ರಕ್ತಸ್ರಾವವಾಗಬಹುದು , ಸನ್ನಿವಾತ/ಮೆದುಳಿನ ಹೊದಿಕೆಯ ಜ್ವರ ಲಕ್ಷಣಗಳು , ರೋಗದ ತೀವ್ರತೆಯು ರೋಗಿಯ ಪ್ರತಿರೋಧಕ ಶಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ.

ಮುಂಜಾಗ್ರತಾ ಕ್ರಮಗಳು ಹೇಗೆ? : ವಾಸ ಸ್ಥಳದ ಸುತ್ತಮುತ್ತ  ಅಥವಾ ಮನೆ ಸಮೀಪದ ಕಾಡಿನಲ್ಲಿ ಮಂಗ ಸತ್ತಿರುವುದು ತಿಳಿದೊಡನೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ತಿಳಿಸುವುದು.  ಮಂಗ ಸಾಯುತ್ತಿರುವ ಕಾಡಿನಲ್ಲಿ ಸಂಚಾರ ಮಾಡುವಾಗ ಮೈತುಂಬಾ ಬಟ್ಟೆ ಧರಿಸಿರಬೇಕು. ಡಿ.ಎಂ.ಪಿ ತೈಲವನ್ನು ಕೈ-ಕಾಲುಗಳಿಗೆ ಲೇಪಿಸಿಕೊಂಡು ಕಾಡಿಗೆ ಹೋಗಬೇಕು.  ಕಾಡಿನಿಂದ ಬಂದ ನಂತರ ಬಿಸಿ ನೀರಿನಿಂದ ಸೋಪು ಹಚ್ಚಿ ಸ್ನಾನ ಮಾಡಬೇಕು. ಬಟ್ಟೆಗಳನ್ನು ಬಿಸಿ ನೀರಿನಿಂದ ಸೋಪು ಹಚ್ಚಿ ತೊಳೆಯಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

4 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

15 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

19 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago