Advertisement
MIRROR FOCUS

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ | ರೋಗ ನಿರೋಧಕ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ |

Share

ಶಿವಮೊಗ್ಗ ಜಿಲ್ಲೆ ಅರಳುಗೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಪರಿಶೀಲನಾ ಸಭೆ ನಡೆಸಿದರು.

ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲೆಯಲ್ಲಿ ಸಾಮಾನ್ಯವಾಗಿ ಚಳಿಗಾಲದ ಸಂದರ್ಭದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಲವು ಸಾವು ಪ್ರಕರಣಗಳು ಸಂಭವಿಸಿವೆ ಎಂದು ಸಚಿವರ ಗಮನಕ್ಕೆ ತಂದರು.

ಮಂಗನ ಕಾಯಿಲೆ ಗುಣಪಡಿಸಬಹುದಾಗಿದ್ದು, ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಮೂಲಕ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಸಚಿವರು, ಮಂಗನ ಕಾಯಿಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೋಗ ನಿರೋಧಕ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದಕ್ಕಾಗಿ ಹೈದರಾಬಾದಿನ ಸಂಸ್ಥೆಯೊಂದಕ್ಕೆ 10 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮಂಗನ ಕಾಯಿಲೆಯಿಂದ ಸಾಕಷ್ಟು ಜನರು ಮೃತಪಟ್ಟಿದ್ದು, ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು,  ಜನರನ್ನು ಮಂಗನಕಾಯಿಲೆ ಭಯದಿಂದ ಹೊರತರಬೇಕಾಗಿದೆ. ಇಲ್ಲಿ ಸೂಕ್ತ ಆಸ್ಪತ್ರೆ, ವೈದ್ಯರು ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು  ಅರಳುಗೋಡು ನಿವಾಸಿಗಳು ಇದೇ ವೇಳೆ ಒತ್ತಾಯಿಸಿದ್ದಾರೆ.

ಏನಿದು ಮಂಗನಕಾಯಿಲೆ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ 1956ರಲ್ಲಿ ಈ ಕಾಯಿಲೆ ಪತ್ತೆ ಆಯಿತು. ಆದ್ದರಿಂದ, ಇದಕ್ಕೆ ಕ್ಯಾಸನೂರು ಕಾಯಿಲೆ ಎಂಬ ಹೆಸರು ಇದೆ. ಮಂಗನಿಂದ ಈ ಕಾಯಿಲೆ ಬರುವುದರಿಂದ ಮಂಗನಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಕಾಡಿನಲ್ಲಿರುವ ಉಣ್ಣೆಗಳು ಕಚ್ಚುವುದರಿಂದ ಮಾತ್ರ ಬರುತ್ತದೆ. ಈ ಕಾಯಿಲೆಯು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಕಾಡಿನಲ್ಲಿ ಮಂಗಗಳು ಸಾಯುವುದೇ ಈ ಕಾಯಿಲೆಯ ಮುನ್ಸೂಚನೆಯಾಗಿದೆ.

ರೋಗದ ಲಕ್ಷಣಗಳು : ಸತತ ಎಂಟು-ಹತ್ತು ದಿನಗಳ ತನಕ ಬಿಡದೇ ಬರುವ ಜ್ವರ ,  ವಿಪರೀತ ತಲೆನೋವು, ಸೋಂಟ ನೋವು, ಕೈಕಾಲು ನೋವು, ನಿಶ್ಯಕ್ತಿ, ಕಣ್ಣು ಕೆಂಪಾಗುವುದು , ಜ್ವರ ಬಂದ 2 ವಾರದ ನಂತರ ಮೂಗು, ಬಾಯಿ, ಗುದದ್ವಾರದಿಂದ ರಕ್ತಸ್ರಾವವಾಗಬಹುದು , ಸನ್ನಿವಾತ/ಮೆದುಳಿನ ಹೊದಿಕೆಯ ಜ್ವರ ಲಕ್ಷಣಗಳು , ರೋಗದ ತೀವ್ರತೆಯು ರೋಗಿಯ ಪ್ರತಿರೋಧಕ ಶಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ.

ಮುಂಜಾಗ್ರತಾ ಕ್ರಮಗಳು ಹೇಗೆ? : ವಾಸ ಸ್ಥಳದ ಸುತ್ತಮುತ್ತ  ಅಥವಾ ಮನೆ ಸಮೀಪದ ಕಾಡಿನಲ್ಲಿ ಮಂಗ ಸತ್ತಿರುವುದು ತಿಳಿದೊಡನೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ತಿಳಿಸುವುದು.  ಮಂಗ ಸಾಯುತ್ತಿರುವ ಕಾಡಿನಲ್ಲಿ ಸಂಚಾರ ಮಾಡುವಾಗ ಮೈತುಂಬಾ ಬಟ್ಟೆ ಧರಿಸಿರಬೇಕು. ಡಿ.ಎಂ.ಪಿ ತೈಲವನ್ನು ಕೈ-ಕಾಲುಗಳಿಗೆ ಲೇಪಿಸಿಕೊಂಡು ಕಾಡಿಗೆ ಹೋಗಬೇಕು.  ಕಾಡಿನಿಂದ ಬಂದ ನಂತರ ಬಿಸಿ ನೀರಿನಿಂದ ಸೋಪು ಹಚ್ಚಿ ಸ್ನಾನ ಮಾಡಬೇಕು. ಬಟ್ಟೆಗಳನ್ನು ಬಿಸಿ ನೀರಿನಿಂದ ಸೋಪು ಹಚ್ಚಿ ತೊಳೆಯಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

21 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago