ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಒರೆಸಿಕೊಳ್ಳುವುದಲ್ಲದೆ ಬಳಿಕ ಚೇರ್ ಹಾಗೂ ಟೇಬಲ್ ಸ್ವಚ್ಛ ಮಾಡಿದ್ದ.
ಇದಾದ ಬಳಿಕ ಧ್ವಜವನ್ನು ಕೆಳಗೆ ಎಸೆದಿದ್ದ. ಈ ಘಟನೆ ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡುತ್ತಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ವ್ಯಕ್ತಿ ವಿರುದ್ಧ ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಆತನನ್ನು ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು. ಈಗ ಈ ಕುರಿತಂತೆ ತನಿಖೆ ನಡೆಸಿರುವ ಕೇರಳ ಪೊಲೀಸರು ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಅಸಲಿ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ.
ಘಟನೆ ನಡೆದಿರುವುದು ಒಡಿಶಾದ ಪುರಿ ಜಿಲ್ಲೆಯ ಸಿಮಿಲಿ ಗ್ರಾಮ ಪಂಚಾಯತ್ ನಲ್ಲಿ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಈ ಕುರಿತು ಅಲ್ಲಿನ ಪೊಲೀಸರಿಗೆ ಮಾಹಿತಿಯನ್ನೂ ಸಹ ನೀಡಲಾಗಿದೆ ಎಂದು ಹೇಳಲಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…