ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಒರೆಸಿಕೊಳ್ಳುವುದಲ್ಲದೆ ಬಳಿಕ ಚೇರ್ ಹಾಗೂ ಟೇಬಲ್ ಸ್ವಚ್ಛ ಮಾಡಿದ್ದ.
ಇದಾದ ಬಳಿಕ ಧ್ವಜವನ್ನು ಕೆಳಗೆ ಎಸೆದಿದ್ದ. ಈ ಘಟನೆ ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡುತ್ತಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ವ್ಯಕ್ತಿ ವಿರುದ್ಧ ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಆತನನ್ನು ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು. ಈಗ ಈ ಕುರಿತಂತೆ ತನಿಖೆ ನಡೆಸಿರುವ ಕೇರಳ ಪೊಲೀಸರು ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಅಸಲಿ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ.
ಘಟನೆ ನಡೆದಿರುವುದು ಒಡಿಶಾದ ಪುರಿ ಜಿಲ್ಲೆಯ ಸಿಮಿಲಿ ಗ್ರಾಮ ಪಂಚಾಯತ್ ನಲ್ಲಿ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಈ ಕುರಿತು ಅಲ್ಲಿನ ಪೊಲೀಸರಿಗೆ ಮಾಹಿತಿಯನ್ನೂ ಸಹ ನೀಡಲಾಗಿದೆ ಎಂದು ಹೇಳಲಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…