ಚಿಕ್ಕಮಗಳೂರು ಜಿಲ್ಲೆಯಲ್ಲಿ 4 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಈ ಕಾಯಿಲೆ ಬಗ್ಗೆ ಅರಣ್ಯದಂಚಿನಲ್ಲಿ ಮತ್ತು ಕಾಫಿ ತೋಟಗಳಲ್ಲಿ ವಾಸವಾಗಿರುವ ಜನರು ಎಚ್ಚರಿಕೆವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಕಂಡು ಬಂದಿರುವ 4 ಪ್ರಕರಣಗಳಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿದ್ದು, ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ. ಹಾಗಾಗಿ ಕಾಡು ಅಥವಾ ತೋಟಗಳಿಗೆ ತೆರಳುವವರು ಮೈತುಂಬ ಬಟ್ಟೆ ತೊಡಬೇಕು, ಹೆಚ್ಚಿನ ಚಳಿ, ಜ್ವರ, ತಲೆನೋವು, ಶೀತ, ವಾಂತಿ ಉಂಟಾದರೆ ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…