ಚಿಕ್ಕಮಗಳೂರು ಜಿಲ್ಲೆಯಲ್ಲಿ 4 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಈ ಕಾಯಿಲೆ ಬಗ್ಗೆ ಅರಣ್ಯದಂಚಿನಲ್ಲಿ ಮತ್ತು ಕಾಫಿ ತೋಟಗಳಲ್ಲಿ ವಾಸವಾಗಿರುವ ಜನರು ಎಚ್ಚರಿಕೆವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಕಂಡು ಬಂದಿರುವ 4 ಪ್ರಕರಣಗಳಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿದ್ದು, ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ. ಹಾಗಾಗಿ ಕಾಡು ಅಥವಾ ತೋಟಗಳಿಗೆ ತೆರಳುವವರು ಮೈತುಂಬ ಬಟ್ಟೆ ತೊಡಬೇಕು, ಹೆಚ್ಚಿನ ಚಳಿ, ಜ್ವರ, ತಲೆನೋವು, ಶೀತ, ವಾಂತಿ ಉಂಟಾದರೆ ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…