Advertisement
ಸುದ್ದಿಗಳು

ಕ್ಯಾಶ್ಯೂ ಫಾರ್ಮರ್ಸ್ ಟ್ರ್ಯಾಕಿಂಗ್ ಸಿಸ್ಟಮ್ | ರೈತರಿಗೆ ಇದು ಅನುಕೂಲ ಹೇಗೆ..?

Share

ಮಳೆಗಾಲದಲ್ಲಿ ಒಂದಷ್ಟು ಹೊಸ ಹಣ್ಣಿನ ಗಿಡಗಳನ್ನು ತರಲು ನರ್ಸರಿಗಳಿಗೆ ಹೋಗಿದ್ದೀರಿ. ಲೋಂಗಾನ್, ಬಾಕುಪಾರಿ, ಕೈಮಿತೋ, ಜಬೋಟಿಕಾಬಾ ಹೀಗೆ ಚಿತ್ರವಿಚಿತ್ರ ಹಾಗೂ ಆಕರ್ಷಕ ಹೆಸರುಗಳಿರುವ ಗಿಡಗಳನ್ನು ಕೊಳ್ಳುತ್ತೀರಿ. ಆದರೆ ಖರೀದಿಸುವಾಗ ನೆನಪಿರುವ ಈ ಗಿಡಗಳ ಹೆಸರು ನಂತರದ ದಿನಗಳಲ್ಲಿ ಮರೆತುಹೋಗುತ್ತದೆ!

Advertisement
Advertisement

ಹಲವು ಕೃಷಿಕರು ಈ ಸಮಸ್ಯೆಗೆ ಸಿಲುಕಿದ್ದನ್ನು ಸ್ವತ: ಕಂಡಿದ್ದೇನೆ. ಅದರಲ್ಲೂ ನೂರೆಂಟು ರೀತಿಯ, ಹೆಸರೇ ಕೇಳದ ಹಣ್ಣಿನ ಗಿಡಗಳಿರುವಾಗ ಹೀಗಾಗುವುದು ಬಹಳ ಸಹಜ. ಇನ್ನು, ಪರಿಚಿತ ಗಿಡಗಳಲ್ಲಿ ಇರುವ ವಿವಿಧ ತಳಿಗಳ ಹೆಸರು ಮರೆತುಹೋಗುವ ಸಂಭವ ಇದೆ. ದೀರ್ಘಾವಧಿ ಬೆಳೆಗಳಲ್ಲಿ ಹೂವು-ಹಣ್ಣು ಆಗದ ಹೊರತು ತಳಿಗಳ ಪತ್ತೆಹಚ್ಚುವುದು ಕಷ್ಟ. ಹಾಗಾಗಿ ಇವುಗಳ ಸಂಕ್ಷಿಪ್ತ ಮಾಹಿತಿ, ಕೃಷಿಕ್ರಮ ಹಾಗೂ ಫೋಟೋಗಳು ತಕ್ಷಣಕ್ಕೆ ಸಿಕ್ಕರೆ ಬಹಳ ಅನುಕೂಲ. ಇಲ್ಲಿ ತಂತ್ರಜ಼್ಞಾನ ಉಪಯೋಗಕ್ಕೆ ಬರಬಲ್ಲುದು. ಈಗಂತೂ ಮೊಬೈಲಿನಿಂದ ಸ್ಕ್ಯಾನ್ ಮಾಡುವ ಮಾಡುವ ಕ್ಯೂಆರ್ ಕೋಡ್ ಗಳು ಎಲ್ಲರಿಗೂ ಪರಿಚಿತ. ಇದನ್ನೇ ಗಿಡಗಳ ಮಾಹಿತಿ ನೀಡಲು ಬಳಸಿಕೊಂಡರೆ?

Advertisement

ಈ ನಿಟ್ಟಿನಲ್ಲಿ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನ ವಿಜ್ನಾನಿ ಡಾ. ಮೋಹನ್ ತಲಕಾಲುಕೊಪ್ಪ ಮತ್ತವರ ತಂಡ ಗೇರು ತಳಿಗಳ ಗುರುತಿಸುವಿಕೆಗೆ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಅಲ್ಲಿನ ಗೇರು ನರ್ಸರಿಯಲ್ಲಿ ಗಿಡ ಕೊಂಡಾಗ ಬಿಲ್ ಮೇಲೆ ಕ್ಯೂಆರ್ ಕೋಡ್ ಬರುತ್ತದೆ. ಅದನ್ನು ಮೊಬೈಲಿನಲ್ಲಿ ಸ್ಕ್ಯಾನ್ ಮಾಡಿದರೆ ನೀವು ಖರೀದಿಸಿದ ತಳಿಗಳ ಸಂಕ್ಷಿಪ್ತ ಮಾಹಿತಿ, ಸಂಪರ್ಕ ಸಂಖ್ಯೆ ಹಾಗೂ ಕೆಲವು ಉಪಯುಕ್ತ ಕೊಂಡಿಗಳು ಸಿಗುತ್ತವೆ. ಹಿಮ್ಮಾಹಿತಿ ನೀಡುವ ಅವಕಾಶವೂ ಇದೆ. ಗಿಡಗಳಿಗೆ ಕ್ಯೂಆರ್ ಕೋಡ್ ಲೇಬಲ್ ಗಳನ್ನು ಹಾಕಿದರೆ ಮಳೆ, ಸಾಗಣೆ, ಮಣ್ಣಿನ ಸಂಪರ್ಕ ಇತ್ಯಾದಿಗಳಿಂದ ಹಾಳಾಗುವ ಸಾಧ್ಯತೆ. ಜೊತೆಗೆ ಕೆಲವು ಬೆಳೆಗಳಲ್ಲಿ ನೂರರ ಲೆಕ್ಕದಲ್ಲಿ ಗಿಡ ಕೊಳ್ಳುವಾಗ ಎಲ್ಲ ಗಿಡಗಳಿಗೂ ಲೇಬಲ್ ಹಾಕಿದರೆ ವೆಚ್ಚ ಜಾಸ್ತಿ. ಹಾಗಾಗಿ ಬಿಲ್ಲಿನಲ್ಲೇ ಕ್ಯೂಆರ್ ಕೋಡ್ ಬರುವ ಹಾಗೆ ವ್ಯವಸ್ಥೆ. ಈ ಕೋಡ್ ನ್ನು ನೀವು ನಿಮ್ಮ ಮೊಬೈಲಿನಲ್ಲಿಟ್ಟುಕೊಂಡು ಬೇಕೆಂದಾಗ ಮಾಹಿತಿ ಪಡೆಯಬಹುದು.‌

Advertisement

ಈ ತಂತ್ರಾಂಶ ಇಷ್ಟಕ್ಕೇ ಸೀಮಿತವಲ್ಲ. ದೇಶದಾದ್ಯಂತ ಸಾವಿರಾರು ಕೃಷಿಕರು ಗೇರು ಸಂಶೋಧನಾ ಕೇಂದ್ರದಿಂದ ಗಿಡಗಳನ್ನು ತೆಗೆದುಕೊಂಡು ಹೋಗುತ್ತಾರೆ. ಇವರೆಲ್ಲರ ಮಾಹಿತಿಯನ್ನು ಪತ್ತೆಹಚ್ಚುವುದು ಕಷ್ಟಸಾಧ್ಯ. ಗಿಡಗಳು ಯಾವ್ಯಾವ ಜಿಲ್ಲೆ, ತಾಲೂಕು, ಹಳ್ಳಿಗಳಿಗೆ ಯಾವಾಗ ತಲುಪಿದೆ ಎಂಬ ವಿವರ ಸುಲಭಕ್ಕೆ ಸಿಗುವುದಿಲ್ಲ. ಇವೆಲ್ಲದರ ಜೊತೆಗೆ ಒಂದು ನಿರ್ದಿಷ್ಟ ಅವಧಿಗೆ ಎಷ್ಟು ಮಾರಾಟವಾಯಿತು ಅಥವಾ ನಿರ್ದಿಷ್ಟ ಸಂಖ್ಯೆಯ ಗಿಡ/ತಳಿ ಕೊಂಡುಹೋದ ಗೇರು ಕೃಷಿಕರನ್ನು ಪತ್ತೆಹಚ್ಚುವುದು, ವಿವಿಧ ತಿಂಗಳುಗಳ ಮಾರಾಟ ಇತ್ಯಾದಿ ವಿವರ ಪಡೆಯುವುದು ಈ ತಂತ್ರಾಂಶದಿಂದ ಚಿಟಿಕೆ ಹೊಡೆದಷ್ಟು ಸುಲಭ. ಇಷ್ಟಲ್ಲದೆ ತಂತ್ರಾಂಶದ ಮಾಹಿತಿಯಿಂದ ಗಿಡ/ತಳಿ ಹಂಚಿಕೆಯ ವಿವಿಧ ಪ್ರದೇಶಗಳ ನಕ್ಷೆ ತಯಾರಿಸಲು ಅನುಕೂಲ. ಅಂದರೆ ಇದು ಒಂದು ನರ್ಸರಿ ಅಥವಾ ಸಂಸ್ಥೆಯ ಕೆಲಸದ ಪ್ರಭಾವವನ್ನು ಪರೀಕ್ಷಿಸಲೂ ಅನುವಾಗುತ್ತದೆ.

ಇದಲ್ಲದೆ, ಗೇರು ಕೃಷಿಕರ ತೋಟಗಳಲ್ಲಿ ಎಷ್ಟು ಗಿಡ ಈಗ ಉಳಿದಿದೆ ಹಾಗೂ ಅವರು ಯಾವ ಅಂತರದಲ್ಲಿ ಗಿಡ ನೆಟ್ಟಿದ್ದಾರೆ ಅಂತ ವಿವರ ಪಡೆದು ದೇಶದ ಎಷ್ಟು ಎಕರೆ ಪ್ರದೇಶದಲ್ಲಿ ಸಂಸ್ಥೆಯ ಗಿಡಗಳಿವೆ ಎಂಬುದನ್ನು ಅಂದಾಜು ಮಾಡಬಹುದು! ಕೃಷಿಮಾಹಿತಿ ನಿಜವಾಗಿ ಯಾರಿಗೆ/ ಎಲ್ಲಿಗೆ ಅಗತ್ಯ ಎಂಬುದೂ ಗೊತ್ತಾಗುತ್ತದೆ. ಜೊತೆಗೆ ಹಲವು ವರ್ಷಗಳ ಗಿಡ/ತಳಿ ಬೇಡಿಕೆಯನ್ನು ವಿಶ್ಲೇಷಿಸಿ ಈ ವರ್ಷ ಎಷ್ಟು ಬೇಡಿಕೆ ಬರಬಹುದು ಎಂಬ ಮುನ್ಸೂಚನೆಯನ್ನೂ ಕೆಲಮಟ್ಟಿಗೆ ಪಡೆಯಲು ಸಾಧ್ಯ. ಇವು ಕೃಷಿ ಸಂಶೋಧಕರಿಗೆ/ನರ್ಸರಿ ಮಾಡುವವರಿಗೆ ಬಹು ಅಮೂಲ್ಯ ದತ್ತಾಂಶ. ಹಾಂ, ಗಿಡ ತೆಗೆದುಕೊಂಡು ಹೋದ ಕೃಷಿಕರ ವಿವರ ಪಡೆದು ವಾಟ್ಸಪ್ ಗುಂಪು ಮಾಡಿ ಅವರೊಡನೆ ನಿರಂತರ ಸಂಪರ್ಕದಲ್ಲಿರಲು ಸಾಧ್ಯ.

Advertisement

ಮೂಲತ: ಗೇರಿಗೆ ಅಭಿವೃದ್ಧಿಪಡಿಸಿದ್ದರೂ, ರೈತಸ್ನೇಹಿಯಾದ ಈ ತಂತ್ರಾಂಶವನ್ನು ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನಡಿಯಲ್ಲಿ (ಐಸಿಎಆರ್) ಬರುವ ಹಲವು ಸಂಶೋಧನಾ ಸಂಸ್ಥೆಗಳು ಹಾಗೂ ಕೃಷಿ ವಿಶ್ವವಿದ್ಯಾಲಯಗಳೂ ತಮ್ಮ ಬೆಳೆಗಳಿಗೆ ಅಲ್ಪಸ್ವಲ್ಪ ಬದಲಾವಣೆಗಳೊಂದಿಗೆ ಅಳವಡಿಸಿಕೊಳ್ಳಬಹುದು. ಅಂತೆಯೇ ವಿವಿಧ ರೀತಿಯ ಹೂ, ಹಣ್ಣಿನ ಗಿಡಗಳನ್ನು ಮಾರುವ ಖಾಸಗಿ ನರ್ಸರಿಯವರೂ ಲಾಭದಾಯಕವಾಗಿ ಇದನ್ನು ಬಳಸಿಕೊಳ್ಳಲು ಸಾಧ್ಯ.

Advertisement
ಬರಹ :
ಡಾ. ಮೋಹನ್ ತಲಕಾಲುಕೊಪ್ಪ

ಸಂಪರ್ಕ : 99022 73468

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 19.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ |

20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 hour ago

ಭೂತಾನ್‌ನಿಂದ ಮತ್ತೆ ಹಸಿ ಅಡಿಕೆ ಆಮದಿಗೆ ಅನುಮತಿ | ಈ ಬಾರಿ ಅಸ್ಸಾಂ ಮೂಲಕವೂ ಅವಕಾಶ…! | ಕಳ್ಳಸಾಗಾಣಿಕೆಗೆ ಪರೋಕ್ಷ ಬೆಂಬಲ..?

ಭೂತಾನ್‌ನಿಂದ 17,000 ಟನ್‌ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022…

4 hours ago

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

15 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

15 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

16 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

16 hours ago