Advertisement
ಸುದ್ದಿಗಳು

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

Share

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಈಚೆಗೆ ನಡೆಯಿತು. ಸಭೆಯಲ್ಲಿ ವಿವಿಧ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು. ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ಪರ್ಯಾಯ ಬೆಳೆಯಾಗಿ ಗೇರು ಕೃಷಿಯ ಬಗ್ಗೆಯೂ ಈ ಹಿಂದೆ ಚಿಂತನೆ ನಡೆದಿತ್ತು. ಹೀಗಾಗಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಸಂಪಾಜೆಯಲ್ಲಿ ಗೇರು ಕೃಷಿಯ ಬಗ್ಗೆ ಗೇರು ಸಂಶೋಧನಾ ಮಂಡಳಿ ವಿಜ್ಞಾನಿ ಡಾ.ಅಶ್ವತಿ ಅವರು ಮಾಹಿತಿ ನೀಡಿದರು.

ರಾಷ್ಟೀಯ ಕೃಷಿ ವಿಕಾಸ ಯೋಜನೆ ಗೇರು ಕೃಷಿಯ ಬಗ್ಗೆ ಡಾ. ಅಶ್ವತಿ ಮಾತನಾಡಿ ಸಂಪಾಜೆ ಗ್ರಾಮಕ್ಕೆ ಗೇರು ಸಂಶೋಧನಾ ಮಂಡಳಿಯಿಂದ ಒಂದು ಪ್ರಾಜೆಕ್ಟ್ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಿದ್ದು ಯಶಸ್ವಿಯಾಗಿದೆ. ಇದರಿಂದ ಕೃಷಿಕರಿಗೆ ಗೇರು ಗಿಡಗಳು, ಯಂತ್ರೋಪಕರಣಗಳು, ಹಾಗೂ ಅವಶ್ಯಕತೆ ಇದ್ದಲ್ಲಿ FPO ಮುಂತಾದ ಸೌಲಭ್ಯಗಳನ್ನು ಕೊಡಲು ಸಾಧ್ಯವಿದೆ. ಇದಕ್ಕೆ ಗ್ರಾಮ ಪಂಚಾಯತ್, ಸ್ವ ಸಹಾಯ ಸಂಘದ ಸದಸ್ಯರುಗಳು ಮತ್ತು ಗ್ರಾಮದ ಜನರ ಸಹಕಾರ ಬಹಳ ಮುಖ್ಯ ಆಗಿರುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಜೊತೆಗೆ ನಮ್ಮ ಸಂಸ್ಥೆಯು ಸಂಪರ್ಕದಲ್ಲಿ ಇದ್ದುಕೊಂಡು ಉತ್ತಮ ರೀತಿಯ ಫಲಿತಾಂಶವನ್ನು ನೀಡಲು ಸಹಕಾರ ನೀಡಲಿದೆ. ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ನಿಶಾ ಅವರು  ಸಂಸ್ಥೆಯ ಜೊತೆಗೆ ಸ್ಪಂದಿಸುತ್ತಿದ್ದು  ಗ್ರಾಮ ಪಂಚಾಯತ್ ಸಹಕಾರ ನೀಡುತ್ತಿದೆ ಎಂದು ಹೇಳಿದರು.

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.  ಸಭೆಯಲ್ಲಿ ಲತಾಕುಮಾರಿ ,ವಕೀಲರು ಸುಳ್ಯ, ಮೇರಿ ಎಸ್. ಬ್ಲಾಕ್ ಮೆನೇಜರ್ ನಾನ್ ಪಾರ್ಮ್, NRLM, ಸುಳ್ಯ , ಕೃಷಿಕರಾದ  ಅಶೋಕ್ ಪ್ರಭು , ದೀಪಿಕಾ ಪಿ ಮೇಲ್ವಿಚಾರಕರು ICDS ವಲಯ ಅರಂತೋಡು, ಅನುಷ್ಯ ಜಿಲ್ಲಾ ಮಿಷನ್ ಸಂಯೋಜಕರು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,  ಅವಿನಾಶ್ ಡೆಲ್ಲಾರಿಯೋ ಕ್ಲಸ್ಟರ್ ಸೂಪರ್ ವೈಸರ್ ಎನ್ ಆರ್ ಎಲ್ ಎಂ ,ಸುಜಾತ ಆಪ್ತ ಸಮಾಲೋಚಕಿ ಕೆನರಾ ಬ್ಯಾಂಕ್  ಮೊದಲಾದವರು ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸರಿತಾ ಓಲ್ಗಾ ಡಿ’ಸೋಜಾ  ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

22 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

22 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago