Advertisement
ಸುದ್ದಿಗಳು

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

Share

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಈಚೆಗೆ ನಡೆಯಿತು. ಸಭೆಯಲ್ಲಿ ವಿವಿಧ ವಿಷಯದ ಬಗ್ಗೆ ಮಾಹಿತಿ ನೀಡಲಾಯಿತು. ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ಪರ್ಯಾಯ ಬೆಳೆಯಾಗಿ ಗೇರು ಕೃಷಿಯ ಬಗ್ಗೆಯೂ ಈ ಹಿಂದೆ ಚಿಂತನೆ ನಡೆದಿತ್ತು. ಹೀಗಾಗಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಸಂಪಾಜೆಯಲ್ಲಿ ಗೇರು ಕೃಷಿಯ ಬಗ್ಗೆ ಗೇರು ಸಂಶೋಧನಾ ಮಂಡಳಿ ವಿಜ್ಞಾನಿ ಡಾ.ಅಶ್ವತಿ ಅವರು ಮಾಹಿತಿ ನೀಡಿದರು.

ರಾಷ್ಟೀಯ ಕೃಷಿ ವಿಕಾಸ ಯೋಜನೆ ಗೇರು ಕೃಷಿಯ ಬಗ್ಗೆ ಡಾ. ಅಶ್ವತಿ ಮಾತನಾಡಿ ಸಂಪಾಜೆ ಗ್ರಾಮಕ್ಕೆ ಗೇರು ಸಂಶೋಧನಾ ಮಂಡಳಿಯಿಂದ ಒಂದು ಪ್ರಾಜೆಕ್ಟ್ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಿದ್ದು ಯಶಸ್ವಿಯಾಗಿದೆ. ಇದರಿಂದ ಕೃಷಿಕರಿಗೆ ಗೇರು ಗಿಡಗಳು, ಯಂತ್ರೋಪಕರಣಗಳು, ಹಾಗೂ ಅವಶ್ಯಕತೆ ಇದ್ದಲ್ಲಿ FPO ಮುಂತಾದ ಸೌಲಭ್ಯಗಳನ್ನು ಕೊಡಲು ಸಾಧ್ಯವಿದೆ. ಇದಕ್ಕೆ ಗ್ರಾಮ ಪಂಚಾಯತ್, ಸ್ವ ಸಹಾಯ ಸಂಘದ ಸದಸ್ಯರುಗಳು ಮತ್ತು ಗ್ರಾಮದ ಜನರ ಸಹಕಾರ ಬಹಳ ಮುಖ್ಯ ಆಗಿರುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಜೊತೆಗೆ ನಮ್ಮ ಸಂಸ್ಥೆಯು ಸಂಪರ್ಕದಲ್ಲಿ ಇದ್ದುಕೊಂಡು ಉತ್ತಮ ರೀತಿಯ ಫಲಿತಾಂಶವನ್ನು ನೀಡಲು ಸಹಕಾರ ನೀಡಲಿದೆ. ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ನಿಶಾ ಅವರು  ಸಂಸ್ಥೆಯ ಜೊತೆಗೆ ಸ್ಪಂದಿಸುತ್ತಿದ್ದು  ಗ್ರಾಮ ಪಂಚಾಯತ್ ಸಹಕಾರ ನೀಡುತ್ತಿದೆ ಎಂದು ಹೇಳಿದರು.

Advertisement

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.  ಸಭೆಯಲ್ಲಿ ಲತಾಕುಮಾರಿ ,ವಕೀಲರು ಸುಳ್ಯ, ಮೇರಿ ಎಸ್. ಬ್ಲಾಕ್ ಮೆನೇಜರ್ ನಾನ್ ಪಾರ್ಮ್, NRLM, ಸುಳ್ಯ , ಕೃಷಿಕರಾದ  ಅಶೋಕ್ ಪ್ರಭು , ದೀಪಿಕಾ ಪಿ ಮೇಲ್ವಿಚಾರಕರು ICDS ವಲಯ ಅರಂತೋಡು, ಅನುಷ್ಯ ಜಿಲ್ಲಾ ಮಿಷನ್ ಸಂಯೋಜಕರು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,  ಅವಿನಾಶ್ ಡೆಲ್ಲಾರಿಯೋ ಕ್ಲಸ್ಟರ್ ಸೂಪರ್ ವೈಸರ್ ಎನ್ ಆರ್ ಎಲ್ ಎಂ ,ಸುಜಾತ ಆಪ್ತ ಸಮಾಲೋಚಕಿ ಕೆನರಾ ಬ್ಯಾಂಕ್  ಮೊದಲಾದವರು ಮಾಹಿತಿ ನೀಡಿದರು.

Advertisement

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸರಿತಾ ಓಲ್ಗಾ ಡಿ’ಸೋಜಾ  ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

11 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

13 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

19 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago