Advertisement
ಕೃಷಿ

ಇಲ್ಲಿ ತರಕಾರಿ ಬೆಲೆಗೆ ಗೋಡಂಬಿ ಮಾರಾಟವಾಗಲು ಕಾರಣವೇನು..?

Share

ಜಾರ್ಖಂಡ್ ರಾಜ್ಯದ ಜಮ್ತಾರಾ ಪಟ್ಟಣದಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿ, ಜಾರ್ಖಂಡ್‌’ನ ಗೋಡಂಬಿ ನಗರ ಎಂದು ಕರೆಯಲ್ಪಡುವ ನಲಾ ಎಂಬ ಹಳ್ಳಿಯಿದೆ. ಈ ನಲಾ ಗ್ರಾಮದಲ್ಲಿ ಗೋಡಂಬಿಗಳನ್ನು ತರಕಾರಿಯಂತೆ ಪ್ರತಿ ಕೆಜಿ ಗೆ 20 ರಿಂದ 30 ರೂ ಗಳಿಗೆ ಮಾಡಲಾಗುತ್ತಿದೆ. ಅಂದರೆ ತರಕಾರಿಗಳನ್ನು ಮಾರಕಟ್ಟೆಯಿಂದ ಯಾವ ಕೆಜಿಗೆ ತೆಗೆದುಕೊಳ್ಳುತೇವೆ ಆದರಂತೆ ಇಲ್ಲಿ ಗೊಡಂಬಿಗಳನ್ನು ತೆಗೆದುಕೊಳ್ಳಲಾಗುತ್ತದೆ. ದೇಶದೆಲ್ಲೆಡೆ ದುಬಾರಿ ಬೆಲೆಗೆ ಗೋಡಂಬಿ ಮಾರಾಟವಾಗುತ್ತಿದ್ದೆ ಇಲ್ಲಿ ಮಾತ್ರಾ ಇಷ್ಟು ಕಡಿಮೆಗೆ ಹೇಗೆ ಗೋಡಂಬಿ ಮಾರಾಟ ಮಾಡುತ್ತಾರೆ..? ಇದು ಬಹಳ ಕುತೂಹಲ.

Advertisement

ಸಲಾ ಗ್ರಾಮದಲ್ಲಿ  50 ಎಕರೆಗೂ ಹೆಚ್ಚು ಭೂಮಿ ಗೋಡಂಬಿ ತೋಟಗಳಿಂದ ತುಂಬಿಕೊಂಡಿದ್ದು, ಈ ಗ್ರಾಮವನ್ನು ಭಾರತದ ಗೋಡಂಬಿ ನಗರ ಎಂದು ಕರೆಯಬಹುದಾಗಿದೆ ಕೂಡಾ. ಆದರೆ ಈ ಊರು ಅಷ್ಟೊಂದು ಅಭಿವೃದ್ಧಿ ಹೊಂದಿಲ್ಲದ ಕಾರಣ, ಗ್ರಾಮಸ್ಥರು ಗೋಡಂಬಿಯನ್ನು ಇಷ್ಟು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ.

2010ರಲ್ಲಿ ಜಾರ್ಖಂಡ್ ಅರಣ್ಯ ಇಲಾಖೆ ನಲಾ ಗ್ರಾಮದ ಮಣ್ಣು ಮತ್ತು ಹವಾಮಾನ ಗೋಡಂಬಿ ಬೆಳೆಗೆ ಅತ್ಯಂತ ಸೂಕ್ತ ಎಂದು ಕಂಡುಹಿಡಿದಿತ್ತು. ಈ ಪ್ರದೇಶದಲ್ಲಿ ಲ್ಯಾಟರೈಟ್ ಮಣ್ಣು ಮಧ್ಯಮ ಮಳೆ, ಸೂರ್ಯನ ಬೆಳಕು ಮತ್ತು ತಾಪಮಾನ ಗೋಡಂಬಿ ಮರಗಳ ಬೆಳವಣಿಗೆಗೆ ಆದರ್ಶ. ಇದರಿಂದಾಗಿ ದೊಡ್ಡ ಪ್ರಮಾಣದಲ್ಲಿ ಗೋಡಂಬಿ ಉತ್ಪಾದನೆ ಆರಂಭವಾಯಿತು . ಈಗ ಗ್ರಾಮದಲ್ಲಿ ಸಾವಿರಾರು ಗೇರುಬೀಜದ ಮರಗಳು ಇದ್ದು, ಪ್ರತಿ ವರ್ಷ ಲಕ್ಷಾಂತರ ಕೆಜಿ ಗೊಂಡಂಬಿ ಉತ್ಪಾದನೆಯಾಗುತ್ತದೆ.

ಗೋಡಂಬಿಯ ಪೌಷ್ಟಿಕಾಂಶದ ಮೌಲ್ಯ ಮತ್ತು ಅದನ್ನು ಸ್ವಚ್ಛಗೊಳಿಸುವ ಮತ್ತು ಬಳಕೆಗೆ ಸಿದ್ಧಪಡಿಸುವ ಪ್ರಕ್ರಿಯೆಯಿಂದಾಗಿ, ಗೋಡಂಬಿ ಬೀಜಗಳ ಬೆಲೆ ಯಾವಾಗಲೂ ಗಗನಕ್ಕೇರುವಂತೆ ಮಾಡುತ್ತಿದೆ. ಸದ್ಯ ಗೋಡಂಬಿ ಪ್ರತಿ ಕಿಲೋಗ್ರಾಂಗೆ ಸುಮಾರು ₹800 ರಿಂದ ₹1000 ವರೆಗೆ ಇರುತ್ತದೆ. ಆದರೆ ಜಾರ್ಖಂಡ್‌ ಈ ಪ್ರದೇಶದಲ್ಲಿ ಮಾತ್ರಾ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ.

ಗೋಡಂಬಿಯನ್ನ ಇಷ್ಟು ಕಡಿಮೆ ಬೆಲೆಗೆ ಮಾರಾಟ ಮಾಡಲು ಮುಖ್ಯ ಕಾರಣವೆಂದರೆ, 2010ರಲ್ಲಿ ಗೋಡಂಬಿ ತೋಟಗಳು ಎಲ್ಲರಿಗೂ ಇಲ್ಲಿ ಪರಿಚಿತವಾದವು. ಅದರ ನಂತರ, ಗೋಡಂಬಿ ಕೃಷಿ ದೊಡ್ಡ ಪ್ರಮಾಣದಲ್ಲಿ ಪ್ರಾರಂಭವಾಯಿತು. ಸಸ್ಯಗಳು ಗೋಡಂಬಿ ಹಣ್ಣುಗಳನ್ನ ನೀಡಿದ ತಕ್ಷಣ, ರೈತರು ಅವುಗಳನ್ನ ಸಂಗ್ರಹಿಸಿ ರಸ್ತೆಬದಿಯಲ್ಲಿ ಅಗ್ಗದ ಬೆಲೆಗೆ ಮಾರಾಟ ಮಾಡುತ್ತಾರೆ. ಈ ಸ್ಥಳವು ಹೆಚ್ಚು ಅಭಿವೃದ್ಧಿ ಹೊಂದಿಲ್ಲದ ಕಾರಣ, ಗ್ರಾಮಸ್ಥರು ಗೋಡಂಬಿಯನ್ನು ಇಷ್ಟು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

7 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

14 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

14 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

15 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago