Advertisement
The Rural Mirror ವಾರದ ವಿಶೇಷ

#ಡಿಜಿಟಲ್‌ಇಂಡಿಯಾ | ಜಾತ್ರೆಯಲ್ಲಿ ವ್ಯಾಪಾರಿಗಳ ಕ್ಯಾಶ್‌ ಲೆಸ್ ವ್ಯವಹಾರ | ಗಮನ ಸೆಳೆದ ಕುಕ್ಕೆ ಜಾತ್ರೆ |

Share

ದೇಶವು ಡಿಜಿಟಲ್‌ ವ್ಯವಹಾರ ಆರಂಭವಾಗಿ ವರ್ಷಗಳು ಉರುಳಿದವು. ನೋಟ್‌ ಬ್ಯಾನ್‌ ಬಳಿಕ ಕ್ಯಾಶ್‌ ಲೆಸ್ ವ್ಯವಹಾರಕ್ಕೆ ಸರ್ಕಾರವು ಆದ್ಯತೆ ನೀಡಿತ್ತು. ಇದೀಗ ಜಾತ್ರೆಯಲ್ಲೂ ಡಿಜಿಟಲ್‌ ವ್ಯವಹಾರ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಉತ್ಸವದ ವೇಳೆ ಡಿಜಿಟಲ್‌ ವ್ಯವಹಾರ ಗಮನ ಸೆಳೆಯಿತು.

ಡಿಜಿಟಲ್‌ ವ್ಯವಹಾರ ಆರಂಭಗೊಂಡಾಗ ಅನೇಕರು ಗಾಬರಿಗೊಂಡರು. ಬೀದಿ ಬದಿಯ ವ್ಯಾಪಾರಿಗಳು  ಡಿಜಿಟಲ್‌ ವ್ಯವಸ್ಥೆಗೆ ಬರುವುದು  ಕಷ್ಟ ಎಂದು ಹೇಳಿಕೊಂಡಿದ್ದರು. ಆದರೆ ನಿರೀಕ್ಷೆಗೂ ಮೀರಿ ಇದೀಗ ಡಿಜಿಟಲ್‌ ವ್ಯವಹಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳು, ಸಂತೆ, ಜಾತ್ರೆಯ ವ್ಯವಹಾರದಲ್ಲೂ ಈಗ ಡಿಜಿಟಲ್‌ ವ್ಯವಹಾರ ಆರಂಭಗೊಂಡಿದೆ. ಜನರೂ ಪಾವತಿಗೆ ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ವೇಳೆ ರಸ್ತೆ ಬದಿ ಮಾಲೆ ಇತ್ಯಾದಿ ಮಾರಾಟ ಮಾಡುವ ವ್ಯಾಪರಸ್ಥರಲ್ಲೂ ಪೋನ್‍ಪೇ, ಗೂಗಲ್‍ಪೇ ಮುಂತಾದ ಕ್ಯಾಶ್ ಲೆಸ್ ವ್ಯವಸ್ಥೆ ಜಾರಿಗೆ ಬಂದಿತ್ತು.

ಜಾತ್ರೆ, ಸಂತೆ ಇತ್ಯಾದಿಗಳಲ್ಲಿ ಈಗ ಡಿಜಿಟಲ್‌ ವ್ಯವಹಾರ, ಕ್ಯೂಆರ್‌ ಕೋಡ್‌ ಬಳಕೆ ಮಾಡದೇ ಇದ್ದರೆ ವ್ಯವಹಾರವೂ ಕಡಿಮೆ ಎನ್ನುವ ಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಸೀತಮ್ಮ. ಹಿಂದೆಲ್ಲಾ ಜನರು ಸಂತೆಗೆ ಬರುವಾಗ ಹಣ ತರುತ್ತಿದ್ದರು. ಈಗ ಮೊಬೈಲ್‌ ತರುತ್ತಾರೆ, ಅದರಲ್ಲೇ ಹಣ ಪಾವತಿ ಮಾಡುತ್ತಾರೆ. ಕ್ಯೂ ಆರ್‌ ಕೋಡ್‌, ಡಿಜಿಟಲ್‌ ವ್ಯವಸ್ಥೆ ನಮ್ಮಲ್ಲಿ ಇಲ್ಲದೇ ಇದ್ದರೆ ವ್ಯವಹಾರ ಇಲ್ಲ ಎನ್ನುವ ಪರಿಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಬಸಪ್ಪ.

ಹಣ ಕಳೆದು ಹೋಗುವ ಭಯ, ಕಳ್ಳರ ಭಯ, ಪಿಕ್‌ ಪಾಕೆಟ್‌ ಇತ್ಯಾದಿಗಳಿಂದ ತಪ್ಪಿಸಿಕೊಳ್ಳಲೂ ಡಿಜಿಟಲ್‌ ವ್ಯವಹಾರ ಅನುಕೂಲವಾಗಿದೆ. ತುಂಬಾ ಜನರು ಸೇರಿದಾಗ ನೆಟ್ವರ್ಕ್‌ ಸಮಸ್ಯೆ ಕಂಡುಬರುತ್ತದೆ. ಆಗ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕಾಗಿ ಇಂತಹ ಜಾತ್ರೆಗಳಲ್ಲಿ ಈಗ ನೆಟ್ವರ್ಕ್‌ ಕಡೆಗೂ ಗಮನ ಹರಿಸಬೇಕಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 hour ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

2 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago