Advertisement
The Rural Mirror ವಾರದ ವಿಶೇಷ

#ಡಿಜಿಟಲ್‌ಇಂಡಿಯಾ | ಜಾತ್ರೆಯಲ್ಲಿ ವ್ಯಾಪಾರಿಗಳ ಕ್ಯಾಶ್‌ ಲೆಸ್ ವ್ಯವಹಾರ | ಗಮನ ಸೆಳೆದ ಕುಕ್ಕೆ ಜಾತ್ರೆ |

Share

ದೇಶವು ಡಿಜಿಟಲ್‌ ವ್ಯವಹಾರ ಆರಂಭವಾಗಿ ವರ್ಷಗಳು ಉರುಳಿದವು. ನೋಟ್‌ ಬ್ಯಾನ್‌ ಬಳಿಕ ಕ್ಯಾಶ್‌ ಲೆಸ್ ವ್ಯವಹಾರಕ್ಕೆ ಸರ್ಕಾರವು ಆದ್ಯತೆ ನೀಡಿತ್ತು. ಇದೀಗ ಜಾತ್ರೆಯಲ್ಲೂ ಡಿಜಿಟಲ್‌ ವ್ಯವಹಾರ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಉತ್ಸವದ ವೇಳೆ ಡಿಜಿಟಲ್‌ ವ್ಯವಹಾರ ಗಮನ ಸೆಳೆಯಿತು.

ಡಿಜಿಟಲ್‌ ವ್ಯವಹಾರ ಆರಂಭಗೊಂಡಾಗ ಅನೇಕರು ಗಾಬರಿಗೊಂಡರು. ಬೀದಿ ಬದಿಯ ವ್ಯಾಪಾರಿಗಳು  ಡಿಜಿಟಲ್‌ ವ್ಯವಸ್ಥೆಗೆ ಬರುವುದು  ಕಷ್ಟ ಎಂದು ಹೇಳಿಕೊಂಡಿದ್ದರು. ಆದರೆ ನಿರೀಕ್ಷೆಗೂ ಮೀರಿ ಇದೀಗ ಡಿಜಿಟಲ್‌ ವ್ಯವಹಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳು, ಸಂತೆ, ಜಾತ್ರೆಯ ವ್ಯವಹಾರದಲ್ಲೂ ಈಗ ಡಿಜಿಟಲ್‌ ವ್ಯವಹಾರ ಆರಂಭಗೊಂಡಿದೆ. ಜನರೂ ಪಾವತಿಗೆ ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ವೇಳೆ ರಸ್ತೆ ಬದಿ ಮಾಲೆ ಇತ್ಯಾದಿ ಮಾರಾಟ ಮಾಡುವ ವ್ಯಾಪರಸ್ಥರಲ್ಲೂ ಪೋನ್‍ಪೇ, ಗೂಗಲ್‍ಪೇ ಮುಂತಾದ ಕ್ಯಾಶ್ ಲೆಸ್ ವ್ಯವಸ್ಥೆ ಜಾರಿಗೆ ಬಂದಿತ್ತು.

ಜಾತ್ರೆ, ಸಂತೆ ಇತ್ಯಾದಿಗಳಲ್ಲಿ ಈಗ ಡಿಜಿಟಲ್‌ ವ್ಯವಹಾರ, ಕ್ಯೂಆರ್‌ ಕೋಡ್‌ ಬಳಕೆ ಮಾಡದೇ ಇದ್ದರೆ ವ್ಯವಹಾರವೂ ಕಡಿಮೆ ಎನ್ನುವ ಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಸೀತಮ್ಮ. ಹಿಂದೆಲ್ಲಾ ಜನರು ಸಂತೆಗೆ ಬರುವಾಗ ಹಣ ತರುತ್ತಿದ್ದರು. ಈಗ ಮೊಬೈಲ್‌ ತರುತ್ತಾರೆ, ಅದರಲ್ಲೇ ಹಣ ಪಾವತಿ ಮಾಡುತ್ತಾರೆ. ಕ್ಯೂ ಆರ್‌ ಕೋಡ್‌, ಡಿಜಿಟಲ್‌ ವ್ಯವಸ್ಥೆ ನಮ್ಮಲ್ಲಿ ಇಲ್ಲದೇ ಇದ್ದರೆ ವ್ಯವಹಾರ ಇಲ್ಲ ಎನ್ನುವ ಪರಿಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಬಸಪ್ಪ.

ಹಣ ಕಳೆದು ಹೋಗುವ ಭಯ, ಕಳ್ಳರ ಭಯ, ಪಿಕ್‌ ಪಾಕೆಟ್‌ ಇತ್ಯಾದಿಗಳಿಂದ ತಪ್ಪಿಸಿಕೊಳ್ಳಲೂ ಡಿಜಿಟಲ್‌ ವ್ಯವಹಾರ ಅನುಕೂಲವಾಗಿದೆ. ತುಂಬಾ ಜನರು ಸೇರಿದಾಗ ನೆಟ್ವರ್ಕ್‌ ಸಮಸ್ಯೆ ಕಂಡುಬರುತ್ತದೆ. ಆಗ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕಾಗಿ ಇಂತಹ ಜಾತ್ರೆಗಳಲ್ಲಿ ಈಗ ನೆಟ್ವರ್ಕ್‌ ಕಡೆಗೂ ಗಮನ ಹರಿಸಬೇಕಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

10 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

22 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

24 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago