ದೇಶವು ಡಿಜಿಟಲ್ ವ್ಯವಹಾರ ಆರಂಭವಾಗಿ ವರ್ಷಗಳು ಉರುಳಿದವು. ನೋಟ್ ಬ್ಯಾನ್ ಬಳಿಕ ಕ್ಯಾಶ್ ಲೆಸ್ ವ್ಯವಹಾರಕ್ಕೆ ಸರ್ಕಾರವು ಆದ್ಯತೆ ನೀಡಿತ್ತು. ಇದೀಗ ಜಾತ್ರೆಯಲ್ಲೂ ಡಿಜಿಟಲ್ ವ್ಯವಹಾರ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಉತ್ಸವದ ವೇಳೆ ಡಿಜಿಟಲ್ ವ್ಯವಹಾರ ಗಮನ ಸೆಳೆಯಿತು.
ಡಿಜಿಟಲ್ ವ್ಯವಹಾರ ಆರಂಭಗೊಂಡಾಗ ಅನೇಕರು ಗಾಬರಿಗೊಂಡರು. ಬೀದಿ ಬದಿಯ ವ್ಯಾಪಾರಿಗಳು ಡಿಜಿಟಲ್ ವ್ಯವಸ್ಥೆಗೆ ಬರುವುದು ಕಷ್ಟ ಎಂದು ಹೇಳಿಕೊಂಡಿದ್ದರು. ಆದರೆ ನಿರೀಕ್ಷೆಗೂ ಮೀರಿ ಇದೀಗ ಡಿಜಿಟಲ್ ವ್ಯವಹಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳು, ಸಂತೆ, ಜಾತ್ರೆಯ ವ್ಯವಹಾರದಲ್ಲೂ ಈಗ ಡಿಜಿಟಲ್ ವ್ಯವಹಾರ ಆರಂಭಗೊಂಡಿದೆ. ಜನರೂ ಪಾವತಿಗೆ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ವೇಳೆ ರಸ್ತೆ ಬದಿ ಮಾಲೆ ಇತ್ಯಾದಿ ಮಾರಾಟ ಮಾಡುವ ವ್ಯಾಪರಸ್ಥರಲ್ಲೂ ಪೋನ್ಪೇ, ಗೂಗಲ್ಪೇ ಮುಂತಾದ ಕ್ಯಾಶ್ ಲೆಸ್ ವ್ಯವಸ್ಥೆ ಜಾರಿಗೆ ಬಂದಿತ್ತು.
ಜಾತ್ರೆ, ಸಂತೆ ಇತ್ಯಾದಿಗಳಲ್ಲಿ ಈಗ ಡಿಜಿಟಲ್ ವ್ಯವಹಾರ, ಕ್ಯೂಆರ್ ಕೋಡ್ ಬಳಕೆ ಮಾಡದೇ ಇದ್ದರೆ ವ್ಯವಹಾರವೂ ಕಡಿಮೆ ಎನ್ನುವ ಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಸೀತಮ್ಮ. ಹಿಂದೆಲ್ಲಾ ಜನರು ಸಂತೆಗೆ ಬರುವಾಗ ಹಣ ತರುತ್ತಿದ್ದರು. ಈಗ ಮೊಬೈಲ್ ತರುತ್ತಾರೆ, ಅದರಲ್ಲೇ ಹಣ ಪಾವತಿ ಮಾಡುತ್ತಾರೆ. ಕ್ಯೂ ಆರ್ ಕೋಡ್, ಡಿಜಿಟಲ್ ವ್ಯವಸ್ಥೆ ನಮ್ಮಲ್ಲಿ ಇಲ್ಲದೇ ಇದ್ದರೆ ವ್ಯವಹಾರ ಇಲ್ಲ ಎನ್ನುವ ಪರಿಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಬಸಪ್ಪ.
ಹಣ ಕಳೆದು ಹೋಗುವ ಭಯ, ಕಳ್ಳರ ಭಯ, ಪಿಕ್ ಪಾಕೆಟ್ ಇತ್ಯಾದಿಗಳಿಂದ ತಪ್ಪಿಸಿಕೊಳ್ಳಲೂ ಡಿಜಿಟಲ್ ವ್ಯವಹಾರ ಅನುಕೂಲವಾಗಿದೆ. ತುಂಬಾ ಜನರು ಸೇರಿದಾಗ ನೆಟ್ವರ್ಕ್ ಸಮಸ್ಯೆ ಕಂಡುಬರುತ್ತದೆ. ಆಗ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕಾಗಿ ಇಂತಹ ಜಾತ್ರೆಗಳಲ್ಲಿ ಈಗ ನೆಟ್ವರ್ಕ್ ಕಡೆಗೂ ಗಮನ ಹರಿಸಬೇಕಾಗಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…