Advertisement
The Rural Mirror ವಾರದ ವಿಶೇಷ

#ಡಿಜಿಟಲ್‌ಇಂಡಿಯಾ | ಜಾತ್ರೆಯಲ್ಲಿ ವ್ಯಾಪಾರಿಗಳ ಕ್ಯಾಶ್‌ ಲೆಸ್ ವ್ಯವಹಾರ | ಗಮನ ಸೆಳೆದ ಕುಕ್ಕೆ ಜಾತ್ರೆ |

Share

ದೇಶವು ಡಿಜಿಟಲ್‌ ವ್ಯವಹಾರ ಆರಂಭವಾಗಿ ವರ್ಷಗಳು ಉರುಳಿದವು. ನೋಟ್‌ ಬ್ಯಾನ್‌ ಬಳಿಕ ಕ್ಯಾಶ್‌ ಲೆಸ್ ವ್ಯವಹಾರಕ್ಕೆ ಸರ್ಕಾರವು ಆದ್ಯತೆ ನೀಡಿತ್ತು. ಇದೀಗ ಜಾತ್ರೆಯಲ್ಲೂ ಡಿಜಿಟಲ್‌ ವ್ಯವಹಾರ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಉತ್ಸವದ ವೇಳೆ ಡಿಜಿಟಲ್‌ ವ್ಯವಹಾರ ಗಮನ ಸೆಳೆಯಿತು.

ಡಿಜಿಟಲ್‌ ವ್ಯವಹಾರ ಆರಂಭಗೊಂಡಾಗ ಅನೇಕರು ಗಾಬರಿಗೊಂಡರು. ಬೀದಿ ಬದಿಯ ವ್ಯಾಪಾರಿಗಳು  ಡಿಜಿಟಲ್‌ ವ್ಯವಸ್ಥೆಗೆ ಬರುವುದು  ಕಷ್ಟ ಎಂದು ಹೇಳಿಕೊಂಡಿದ್ದರು. ಆದರೆ ನಿರೀಕ್ಷೆಗೂ ಮೀರಿ ಇದೀಗ ಡಿಜಿಟಲ್‌ ವ್ಯವಹಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳು, ಸಂತೆ, ಜಾತ್ರೆಯ ವ್ಯವಹಾರದಲ್ಲೂ ಈಗ ಡಿಜಿಟಲ್‌ ವ್ಯವಹಾರ ಆರಂಭಗೊಂಡಿದೆ. ಜನರೂ ಪಾವತಿಗೆ ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ವೇಳೆ ರಸ್ತೆ ಬದಿ ಮಾಲೆ ಇತ್ಯಾದಿ ಮಾರಾಟ ಮಾಡುವ ವ್ಯಾಪರಸ್ಥರಲ್ಲೂ ಪೋನ್‍ಪೇ, ಗೂಗಲ್‍ಪೇ ಮುಂತಾದ ಕ್ಯಾಶ್ ಲೆಸ್ ವ್ಯವಸ್ಥೆ ಜಾರಿಗೆ ಬಂದಿತ್ತು.

ಜಾತ್ರೆ, ಸಂತೆ ಇತ್ಯಾದಿಗಳಲ್ಲಿ ಈಗ ಡಿಜಿಟಲ್‌ ವ್ಯವಹಾರ, ಕ್ಯೂಆರ್‌ ಕೋಡ್‌ ಬಳಕೆ ಮಾಡದೇ ಇದ್ದರೆ ವ್ಯವಹಾರವೂ ಕಡಿಮೆ ಎನ್ನುವ ಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಸೀತಮ್ಮ. ಹಿಂದೆಲ್ಲಾ ಜನರು ಸಂತೆಗೆ ಬರುವಾಗ ಹಣ ತರುತ್ತಿದ್ದರು. ಈಗ ಮೊಬೈಲ್‌ ತರುತ್ತಾರೆ, ಅದರಲ್ಲೇ ಹಣ ಪಾವತಿ ಮಾಡುತ್ತಾರೆ. ಕ್ಯೂ ಆರ್‌ ಕೋಡ್‌, ಡಿಜಿಟಲ್‌ ವ್ಯವಸ್ಥೆ ನಮ್ಮಲ್ಲಿ ಇಲ್ಲದೇ ಇದ್ದರೆ ವ್ಯವಹಾರ ಇಲ್ಲ ಎನ್ನುವ ಪರಿಸ್ಥಿತಿ ಬಂದಿದೆ ಎನ್ನುತ್ತಾರೆ ವ್ಯಾಪಾರಿ ಬಸಪ್ಪ.

ಹಣ ಕಳೆದು ಹೋಗುವ ಭಯ, ಕಳ್ಳರ ಭಯ, ಪಿಕ್‌ ಪಾಕೆಟ್‌ ಇತ್ಯಾದಿಗಳಿಂದ ತಪ್ಪಿಸಿಕೊಳ್ಳಲೂ ಡಿಜಿಟಲ್‌ ವ್ಯವಹಾರ ಅನುಕೂಲವಾಗಿದೆ. ತುಂಬಾ ಜನರು ಸೇರಿದಾಗ ನೆಟ್ವರ್ಕ್‌ ಸಮಸ್ಯೆ ಕಂಡುಬರುತ್ತದೆ. ಆಗ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕಾಗಿ ಇಂತಹ ಜಾತ್ರೆಗಳಲ್ಲಿ ಈಗ ನೆಟ್ವರ್ಕ್‌ ಕಡೆಗೂ ಗಮನ ಹರಿಸಬೇಕಾಗಿದೆ.

ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

5 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

11 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

12 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

20 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

22 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago