Opinion

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ ದನವನ್ನು ಕಂಡು ಬಹಳ ಸಂತೋಷವಾಯಿತು. ನಮ್ಮ ದೇಶಿ ದನಗಳೇ ಹಾಗೆ. ನಿಂತ ನಿಲುವು, ಉಬ್ಬಿದ ಭುಜ, ಓಲಾಡುವ ಗಂಗೆದೊಗಲು ಎಂತವರನ್ನೂ ಆಕರ್ಷಿಸಿಯೇ ಬಿಡುತ್ತದೆ. ಆದರೆ ಆಕರ್ಷಣೆಯುಳ್ಳ ಎಲ್ಲವೂ ಹಾಲು ಕರೆಯಲು ಬಿಡಲೇಬೇಕೆಂದೇನೂ ಇಲ್ಲ. ಹಾಲಿರುವುದು ತನ್ನ ಕರುವಿಗಾಗಿಯೇ ವಿನಃ ನಿಮಗಲ್ಲ ಅಂತ ಎಚ್ಚರಿಸುವುದರಲ್ಲಿ ಬಲು ಮುಂದು. ಹಾಗೆ ಮನೆಯವರಲ್ಲಿ ವಿಚಾರಿಸಿದೆ.

Advertisement

ಹಾಲು ಕರೆಯುವ ಮಟ್ಟಿಗೆ ಬಲು ಸಾಧು ದನ. ಆದರೆ ಬೇಜಾರದ ಸಂಗತಿ ಎಂದರೆ ಅದಕ್ಕೊಂದು ಎಲರ್ಜಿ. ಕೆಚ್ಚಲಿನದ್ದೆಲ್ಲ ಸಿಪ್ಪೆ ಆಗಾಗ ಹೋಗುತ್ತಲೇ ಇರುತ್ತದೆ. ಆಗ ನೋವಾದಾಗ ಸ್ವಲ್ಪ ಉಪದ್ರ ಕೊಡುತ್ತದೆ. ಪಶು ವೈದ್ಯರು ಬಂದು ಅನೇಕ ಇಂಜಕ್ಷನ್ ಗಳನ್ನು ಹಚ್ಚಲು ಮುಲಾಮ್ ಅನ್ನು ಕೊಟ್ಟಿದ್ದರು. ಹಚ್ಚಿದ ಮುಲಾಮು ಕರುವಿನ ಹೊಟ್ಟೆಗೆ ಹೋಗದಂತೆ ನೋಡಿಕೊಳ್ಳಿ ಅಂತಲೂ ಎಚ್ಚರಿಸಿದ್ದರು. ಆದರೆ ಕಡಿಮೆಯಂತು ಆಗಿಲ್ಲ ಅಂತ ಬೇಸರಿಸಿದರು.

ನೀವು ಯಾವ ಹಿಂಡಿಯನ್ನು ಹಾಕುವಿರಿ ಅಂತ ಕೇಳಿದೆ . ಸಂತುಲಿತ ಪಶು ಆಹಾರ ಅಂತಂದರು. ಹಳೆಯ ಅನುಭವದ ನನ್ನ ಮನ ಜಾಗೃತಿಗೊಂಡಿತು. 15 ದಿನ ಹಿಂಡಿಯನ್ನು ಬಿಟ್ಟು ನೋಡಿ. ನೆಲಗಡಲೆ ಹಿಂಡಿ ಇತ್ಯಾದಿಯಾಗಿ ಸಹಜ ಆಹಾರವನ್ನು ಕೊಡಿ ಅಂತ ಸೂಚಿಸಿದೆ.

ಹಿಂಡಿಯ ಪರಿಣಾಮ ಆಗಿರಲಾರದು ಅಂತ ಡಾಕ್ಟರ್ ಗಳು ಹೇಳುವರು ಅಂತ ಅಂದಿದ್ದರು. ಆದರೂ ಬಿಟ್ಟು ನೋಡುವೆ ಅಂತ ಹೇಳಿದ್ದರು.

15 ದಿನದ ನಂತರ ಫೋನಾಯಿಸಿದೆ. ಸದಾಶಿವಣ್ಣ ಪೂರ್ತಿ ಗುಣ ಆಗಿದೆ. ಹಾಲು ಕರೆಯಲು ಸರಿಯಾಗಿ ಬಿಡುತ್ತದೆ. ಆದರೆ ಯಾಕೆ ಡಾಕ್ಟರ್ ಗಳು ಒಬ್ಬರೂ ಇದನ್ನು ಹೇಳಿಲ್ಲ ಅಂತ ಆಶ್ಚರ್ಯ ವ್ಯಕ್ತಪಡಿಸಿದರು.

Advertisement

ಅದು ಗುಣವಾದದ್ದು ಆಶ್ಚರ್ಯ ಏನಿಲ್ಲ. ನೈಜ ಆಹಾರವಲ್ಲದ ಯೂರಿಯಾವನ್ನು ಹಿಂಡಿಯ ಖರ್ಚನ್ನು ಕಡಿಮೆಗೊಳಿಸಲು ಬಳಸುವ ದುಷ್ಟ ಯೋಚನೆಯ ಫಲ ಇದು. ದನಗಳ ಆರೋಗ್ಯವನ್ನು, ಅವುಗಳ ಹಾಲಿನ ಮುಖಾಂತರ ಮನುಷ್ಯನ ಆರೋಗ್ಯವನ್ನು ಹಾಳು ಮಾಡುವ ಇಂತಹ ಮಿಶ್ರಣಗಳನ್ನು ಇನ್ನೂ ಇನ್ನೂ ಶಿಫಾರಸು ಮಾಡುವರಲ್ಲ ಅದು ನಿಜವಾದ ಆಶ್ಚರ್ಯ ಅಂತಂದೆ. ಹತ್ತು ಜನರಿಗೆ ಇನ್ನೂ ಹೇಳೋಣ. ದನಗಳ ಆಹಾರದಲ್ಲಿ ಯೂರಿಯಾಗಳಿಂದ ದೂರವಿರೋಣ ಎಂಬ ವಿಷಯವನ್ನು ಹಂಚೋಣ. ಸಹಜ ಆಹಾರವನ್ನೇ ನೀಡೋಣ.

ಬರಹ :
ಎಪಿ ಸದಾಶಿವ ಮರಿಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

39 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

2 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

3 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

3 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

3 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

4 hours ago