Advertisement
Opinion

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

Share

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ ದನವನ್ನು ಕಂಡು ಬಹಳ ಸಂತೋಷವಾಯಿತು. ನಮ್ಮ ದೇಶಿ ದನಗಳೇ ಹಾಗೆ. ನಿಂತ ನಿಲುವು, ಉಬ್ಬಿದ ಭುಜ, ಓಲಾಡುವ ಗಂಗೆದೊಗಲು ಎಂತವರನ್ನೂ ಆಕರ್ಷಿಸಿಯೇ ಬಿಡುತ್ತದೆ. ಆದರೆ ಆಕರ್ಷಣೆಯುಳ್ಳ ಎಲ್ಲವೂ ಹಾಲು ಕರೆಯಲು ಬಿಡಲೇಬೇಕೆಂದೇನೂ ಇಲ್ಲ. ಹಾಲಿರುವುದು ತನ್ನ ಕರುವಿಗಾಗಿಯೇ ವಿನಃ ನಿಮಗಲ್ಲ ಅಂತ ಎಚ್ಚರಿಸುವುದರಲ್ಲಿ ಬಲು ಮುಂದು. ಹಾಗೆ ಮನೆಯವರಲ್ಲಿ ವಿಚಾರಿಸಿದೆ.

ಹಾಲು ಕರೆಯುವ ಮಟ್ಟಿಗೆ ಬಲು ಸಾಧು ದನ. ಆದರೆ ಬೇಜಾರದ ಸಂಗತಿ ಎಂದರೆ ಅದಕ್ಕೊಂದು ಎಲರ್ಜಿ. ಕೆಚ್ಚಲಿನದ್ದೆಲ್ಲ ಸಿಪ್ಪೆ ಆಗಾಗ ಹೋಗುತ್ತಲೇ ಇರುತ್ತದೆ. ಆಗ ನೋವಾದಾಗ ಸ್ವಲ್ಪ ಉಪದ್ರ ಕೊಡುತ್ತದೆ. ಪಶು ವೈದ್ಯರು ಬಂದು ಅನೇಕ ಇಂಜಕ್ಷನ್ ಗಳನ್ನು ಹಚ್ಚಲು ಮುಲಾಮ್ ಅನ್ನು ಕೊಟ್ಟಿದ್ದರು. ಹಚ್ಚಿದ ಮುಲಾಮು ಕರುವಿನ ಹೊಟ್ಟೆಗೆ ಹೋಗದಂತೆ ನೋಡಿಕೊಳ್ಳಿ ಅಂತಲೂ ಎಚ್ಚರಿಸಿದ್ದರು. ಆದರೆ ಕಡಿಮೆಯಂತು ಆಗಿಲ್ಲ ಅಂತ ಬೇಸರಿಸಿದರು.

ನೀವು ಯಾವ ಹಿಂಡಿಯನ್ನು ಹಾಕುವಿರಿ ಅಂತ ಕೇಳಿದೆ . ಸಂತುಲಿತ ಪಶು ಆಹಾರ ಅಂತಂದರು. ಹಳೆಯ ಅನುಭವದ ನನ್ನ ಮನ ಜಾಗೃತಿಗೊಂಡಿತು. 15 ದಿನ ಹಿಂಡಿಯನ್ನು ಬಿಟ್ಟು ನೋಡಿ. ನೆಲಗಡಲೆ ಹಿಂಡಿ ಇತ್ಯಾದಿಯಾಗಿ ಸಹಜ ಆಹಾರವನ್ನು ಕೊಡಿ ಅಂತ ಸೂಚಿಸಿದೆ.

ಹಿಂಡಿಯ ಪರಿಣಾಮ ಆಗಿರಲಾರದು ಅಂತ ಡಾಕ್ಟರ್ ಗಳು ಹೇಳುವರು ಅಂತ ಅಂದಿದ್ದರು. ಆದರೂ ಬಿಟ್ಟು ನೋಡುವೆ ಅಂತ ಹೇಳಿದ್ದರು.

15 ದಿನದ ನಂತರ ಫೋನಾಯಿಸಿದೆ. ಸದಾಶಿವಣ್ಣ ಪೂರ್ತಿ ಗುಣ ಆಗಿದೆ. ಹಾಲು ಕರೆಯಲು ಸರಿಯಾಗಿ ಬಿಡುತ್ತದೆ. ಆದರೆ ಯಾಕೆ ಡಾಕ್ಟರ್ ಗಳು ಒಬ್ಬರೂ ಇದನ್ನು ಹೇಳಿಲ್ಲ ಅಂತ ಆಶ್ಚರ್ಯ ವ್ಯಕ್ತಪಡಿಸಿದರು.

ಅದು ಗುಣವಾದದ್ದು ಆಶ್ಚರ್ಯ ಏನಿಲ್ಲ. ನೈಜ ಆಹಾರವಲ್ಲದ ಯೂರಿಯಾವನ್ನು ಹಿಂಡಿಯ ಖರ್ಚನ್ನು ಕಡಿಮೆಗೊಳಿಸಲು ಬಳಸುವ ದುಷ್ಟ ಯೋಚನೆಯ ಫಲ ಇದು. ದನಗಳ ಆರೋಗ್ಯವನ್ನು, ಅವುಗಳ ಹಾಲಿನ ಮುಖಾಂತರ ಮನುಷ್ಯನ ಆರೋಗ್ಯವನ್ನು ಹಾಳು ಮಾಡುವ ಇಂತಹ ಮಿಶ್ರಣಗಳನ್ನು ಇನ್ನೂ ಇನ್ನೂ ಶಿಫಾರಸು ಮಾಡುವರಲ್ಲ ಅದು ನಿಜವಾದ ಆಶ್ಚರ್ಯ ಅಂತಂದೆ. ಹತ್ತು ಜನರಿಗೆ ಇನ್ನೂ ಹೇಳೋಣ. ದನಗಳ ಆಹಾರದಲ್ಲಿ ಯೂರಿಯಾಗಳಿಂದ ದೂರವಿರೋಣ ಎಂಬ ವಿಷಯವನ್ನು ಹಂಚೋಣ. ಸಹಜ ಆಹಾರವನ್ನೇ ನೀಡೋಣ.

ಬರಹ :
ಎಪಿ ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

11 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

16 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago