Advertisement
Opinion

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

Share

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ ದನವನ್ನು ಕಂಡು ಬಹಳ ಸಂತೋಷವಾಯಿತು. ನಮ್ಮ ದೇಶಿ ದನಗಳೇ ಹಾಗೆ. ನಿಂತ ನಿಲುವು, ಉಬ್ಬಿದ ಭುಜ, ಓಲಾಡುವ ಗಂಗೆದೊಗಲು ಎಂತವರನ್ನೂ ಆಕರ್ಷಿಸಿಯೇ ಬಿಡುತ್ತದೆ. ಆದರೆ ಆಕರ್ಷಣೆಯುಳ್ಳ ಎಲ್ಲವೂ ಹಾಲು ಕರೆಯಲು ಬಿಡಲೇಬೇಕೆಂದೇನೂ ಇಲ್ಲ. ಹಾಲಿರುವುದು ತನ್ನ ಕರುವಿಗಾಗಿಯೇ ವಿನಃ ನಿಮಗಲ್ಲ ಅಂತ ಎಚ್ಚರಿಸುವುದರಲ್ಲಿ ಬಲು ಮುಂದು. ಹಾಗೆ ಮನೆಯವರಲ್ಲಿ ವಿಚಾರಿಸಿದೆ.

ಹಾಲು ಕರೆಯುವ ಮಟ್ಟಿಗೆ ಬಲು ಸಾಧು ದನ. ಆದರೆ ಬೇಜಾರದ ಸಂಗತಿ ಎಂದರೆ ಅದಕ್ಕೊಂದು ಎಲರ್ಜಿ. ಕೆಚ್ಚಲಿನದ್ದೆಲ್ಲ ಸಿಪ್ಪೆ ಆಗಾಗ ಹೋಗುತ್ತಲೇ ಇರುತ್ತದೆ. ಆಗ ನೋವಾದಾಗ ಸ್ವಲ್ಪ ಉಪದ್ರ ಕೊಡುತ್ತದೆ. ಪಶು ವೈದ್ಯರು ಬಂದು ಅನೇಕ ಇಂಜಕ್ಷನ್ ಗಳನ್ನು ಹಚ್ಚಲು ಮುಲಾಮ್ ಅನ್ನು ಕೊಟ್ಟಿದ್ದರು. ಹಚ್ಚಿದ ಮುಲಾಮು ಕರುವಿನ ಹೊಟ್ಟೆಗೆ ಹೋಗದಂತೆ ನೋಡಿಕೊಳ್ಳಿ ಅಂತಲೂ ಎಚ್ಚರಿಸಿದ್ದರು. ಆದರೆ ಕಡಿಮೆಯಂತು ಆಗಿಲ್ಲ ಅಂತ ಬೇಸರಿಸಿದರು.

ನೀವು ಯಾವ ಹಿಂಡಿಯನ್ನು ಹಾಕುವಿರಿ ಅಂತ ಕೇಳಿದೆ . ಸಂತುಲಿತ ಪಶು ಆಹಾರ ಅಂತಂದರು. ಹಳೆಯ ಅನುಭವದ ನನ್ನ ಮನ ಜಾಗೃತಿಗೊಂಡಿತು. 15 ದಿನ ಹಿಂಡಿಯನ್ನು ಬಿಟ್ಟು ನೋಡಿ. ನೆಲಗಡಲೆ ಹಿಂಡಿ ಇತ್ಯಾದಿಯಾಗಿ ಸಹಜ ಆಹಾರವನ್ನು ಕೊಡಿ ಅಂತ ಸೂಚಿಸಿದೆ.

ಹಿಂಡಿಯ ಪರಿಣಾಮ ಆಗಿರಲಾರದು ಅಂತ ಡಾಕ್ಟರ್ ಗಳು ಹೇಳುವರು ಅಂತ ಅಂದಿದ್ದರು. ಆದರೂ ಬಿಟ್ಟು ನೋಡುವೆ ಅಂತ ಹೇಳಿದ್ದರು.

15 ದಿನದ ನಂತರ ಫೋನಾಯಿಸಿದೆ. ಸದಾಶಿವಣ್ಣ ಪೂರ್ತಿ ಗುಣ ಆಗಿದೆ. ಹಾಲು ಕರೆಯಲು ಸರಿಯಾಗಿ ಬಿಡುತ್ತದೆ. ಆದರೆ ಯಾಕೆ ಡಾಕ್ಟರ್ ಗಳು ಒಬ್ಬರೂ ಇದನ್ನು ಹೇಳಿಲ್ಲ ಅಂತ ಆಶ್ಚರ್ಯ ವ್ಯಕ್ತಪಡಿಸಿದರು.

ಅದು ಗುಣವಾದದ್ದು ಆಶ್ಚರ್ಯ ಏನಿಲ್ಲ. ನೈಜ ಆಹಾರವಲ್ಲದ ಯೂರಿಯಾವನ್ನು ಹಿಂಡಿಯ ಖರ್ಚನ್ನು ಕಡಿಮೆಗೊಳಿಸಲು ಬಳಸುವ ದುಷ್ಟ ಯೋಚನೆಯ ಫಲ ಇದು. ದನಗಳ ಆರೋಗ್ಯವನ್ನು, ಅವುಗಳ ಹಾಲಿನ ಮುಖಾಂತರ ಮನುಷ್ಯನ ಆರೋಗ್ಯವನ್ನು ಹಾಳು ಮಾಡುವ ಇಂತಹ ಮಿಶ್ರಣಗಳನ್ನು ಇನ್ನೂ ಇನ್ನೂ ಶಿಫಾರಸು ಮಾಡುವರಲ್ಲ ಅದು ನಿಜವಾದ ಆಶ್ಚರ್ಯ ಅಂತಂದೆ. ಹತ್ತು ಜನರಿಗೆ ಇನ್ನೂ ಹೇಳೋಣ. ದನಗಳ ಆಹಾರದಲ್ಲಿ ಯೂರಿಯಾಗಳಿಂದ ದೂರವಿರೋಣ ಎಂಬ ವಿಷಯವನ್ನು ಹಂಚೋಣ. ಸಹಜ ಆಹಾರವನ್ನೇ ನೀಡೋಣ.

ಬರಹ :
ಎಪಿ ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

7 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

8 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

15 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

21 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

21 hours ago