ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

July 15, 2024
10:47 AM

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement
Advertisement

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ
June 9, 2025
9:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ
ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ
June 9, 2025
7:27 AM
by: ದ ರೂರಲ್ ಮಿರರ್.ಕಾಂ
ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group