Advertisement
ಸುದ್ದಿಗಳು

ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

Share

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 hour ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

23 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago