ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.
1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…