ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.
1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…