Advertisement
ಸುದ್ದಿಗಳು

ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

Share

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

Advertisement

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

12 minutes ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

7 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

13 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

13 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

23 hours ago