Advertisement
ಸುದ್ದಿಗಳು

ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

Share

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

8 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

8 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

9 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

11 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

22 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

22 hours ago