Advertisement
The Rural Mirror ಫಾಲೋಅಪ್

#CauveryWater | ಕಾವೇರಿ ವಿವಾದ : ಎಚ್ಚೆತ್ತುಕೊಂಡ ಕರ್ನಾಟಕ ರಾಜ್ಯ ಸರ್ಕಾರ | ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಸರ್ಕಾರ

Share

ಕಾವೇರಿ ನೀರು #Cauverywater ಉಳಿಸಿಕೊಳ್ಳುವ ಸಲುವಾಗಿ ವಾರದಲ್ಲಿ ಎರಡು ಬಂದ್‌, ಪ್ರತಿಭಟನೆ, ಹೋರಾಟ ನಡೆದಿದೆ.. ನಡೆಯುತ್ತಲೇ ಇದೆ. ರಾಜ್ಯಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆ ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ, ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ಅದರಲ್ಲಿ ಎರಡು ಬೇಡಿಕೆಗಳನ್ನು ಇಡಲಾಗಿದೆ.

ನೀರು ಬಿಡಲು ಸಾಧ್ಯವಿಲ್ಲ. ಹಾಗೂ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಬೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ. ಇನ್ನು ನಿನ್ನೆ ನಡೆದ ಸಭೆಯಲ್ಲಿ ರಾಜ್ಯದ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಎಂದು ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ಕೂಡ ನೀಡಿದ್ದಾರೆ.

ಇದರ ಜೊತೆಗೆ ನ್ಯಾಯಮೂರ್ತಿಗಳು ಹಾಗೂ ವಕೀಲರು ‘ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ, ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ-ಅಂಶಗಳನ್ನ ಹೊರಗಡೆ ಹೇಳುವುದು ಸರಿಯಲ್ಲ ಎಂದು  ಸಲಹೆ ನೀಡಿದ್ದರು. ಇನ್ನು ನ್ಯಾಯಮೂರ್ತಿಗಳ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

11 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

11 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

11 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

12 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

23 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago