ಕಾವೇರಿ ನೀರು #Cauverywater ಉಳಿಸಿಕೊಳ್ಳುವ ಸಲುವಾಗಿ ವಾರದಲ್ಲಿ ಎರಡು ಬಂದ್, ಪ್ರತಿಭಟನೆ, ಹೋರಾಟ ನಡೆದಿದೆ.. ನಡೆಯುತ್ತಲೇ ಇದೆ. ರಾಜ್ಯಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆ ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ, ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ಅದರಲ್ಲಿ ಎರಡು ಬೇಡಿಕೆಗಳನ್ನು ಇಡಲಾಗಿದೆ.
ನೀರು ಬಿಡಲು ಸಾಧ್ಯವಿಲ್ಲ. ಹಾಗೂ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಬೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ. ಇನ್ನು ನಿನ್ನೆ ನಡೆದ ಸಭೆಯಲ್ಲಿ ರಾಜ್ಯದ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಎಂದು ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್ಗೆ ಸಲ್ಲಿಸಿ ಎಂದು ಸಲಹೆ ಕೂಡ ನೀಡಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…