ಕಾವೇರಿ ನೀರು #Cauverywater ಉಳಿಸಿಕೊಳ್ಳುವ ಸಲುವಾಗಿ ವಾರದಲ್ಲಿ ಎರಡು ಬಂದ್, ಪ್ರತಿಭಟನೆ, ಹೋರಾಟ ನಡೆದಿದೆ.. ನಡೆಯುತ್ತಲೇ ಇದೆ. ರಾಜ್ಯಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆ ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ, ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ಅದರಲ್ಲಿ ಎರಡು ಬೇಡಿಕೆಗಳನ್ನು ಇಡಲಾಗಿದೆ.
ನೀರು ಬಿಡಲು ಸಾಧ್ಯವಿಲ್ಲ. ಹಾಗೂ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಬೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ. ಇನ್ನು ನಿನ್ನೆ ನಡೆದ ಸಭೆಯಲ್ಲಿ ರಾಜ್ಯದ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಎಂದು ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್ಗೆ ಸಲ್ಲಿಸಿ ಎಂದು ಸಲಹೆ ಕೂಡ ನೀಡಿದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…