#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

August 25, 2023
5:04 PM
ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ಕಾವೇರಿ ನದಿ ನೀರು ವಿಷಯದಲ್ಲಿ ಸದಾ ಒಂದಿಲ್ಲ ಒಂದು ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್  ಮೆಟ್ಟಿಲೇರುವ ತಮಿಳುನಾಡಿಗೆ ಇಂದು ಸರಿಯಾಗಿ ಮುಖಭಂಗವಾಗಿದೆ. ಪ್ರತಿ ದಿನ 24,000 ಕ್ಯೂಸೆಕ್‌ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು.

ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ.

ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.

ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್‌ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.

Source

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror