Advertisement
MIRROR FOCUS

#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

Share

ಕಾವೇರಿ ನದಿ ನೀರು ವಿಷಯದಲ್ಲಿ ಸದಾ ಒಂದಿಲ್ಲ ಒಂದು ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್  ಮೆಟ್ಟಿಲೇರುವ ತಮಿಳುನಾಡಿಗೆ ಇಂದು ಸರಿಯಾಗಿ ಮುಖಭಂಗವಾಗಿದೆ. ಪ್ರತಿ ದಿನ 24,000 ಕ್ಯೂಸೆಕ್‌ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು.

ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ.

ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.

Advertisement

ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್‌ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.

Source

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

5 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

6 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

6 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

6 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

6 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

23 hours ago