ಕಾವೇರಿ ನದಿ ನೀರು ವಿಷಯದಲ್ಲಿ ಸದಾ ಒಂದಿಲ್ಲ ಒಂದು ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ತಮಿಳುನಾಡಿಗೆ ಇಂದು ಸರಿಯಾಗಿ ಮುಖಭಂಗವಾಗಿದೆ. ಪ್ರತಿ ದಿನ 24,000 ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು.
ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.
ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ.
ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.
ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.
Source
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…