Advertisement
MIRROR FOCUS

#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

Share

ಕಾವೇರಿ ನದಿ ನೀರು ವಿಷಯದಲ್ಲಿ ಸದಾ ಒಂದಿಲ್ಲ ಒಂದು ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್  ಮೆಟ್ಟಿಲೇರುವ ತಮಿಳುನಾಡಿಗೆ ಇಂದು ಸರಿಯಾಗಿ ಮುಖಭಂಗವಾಗಿದೆ. ಪ್ರತಿ ದಿನ 24,000 ಕ್ಯೂಸೆಕ್‌ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು.

ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ.

ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.

ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್‌ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.

Source

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

5 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago