Advertisement
MIRROR FOCUS

#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

Share

ಕಾವೇರಿ ನದಿ ನೀರು ವಿಷಯದಲ್ಲಿ ಸದಾ ಒಂದಿಲ್ಲ ಒಂದು ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್  ಮೆಟ್ಟಿಲೇರುವ ತಮಿಳುನಾಡಿಗೆ ಇಂದು ಸರಿಯಾಗಿ ಮುಖಭಂಗವಾಗಿದೆ. ಪ್ರತಿ ದಿನ 24,000 ಕ್ಯೂಸೆಕ್‌ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು.

ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ.

ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.

ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್‌ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.

Source

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

10 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

19 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

21 hours ago