Advertisement
ಪ್ರಮುಖ

#CauveryWater | ಕಾವೇರಿ ನೀರು ಬಿಡುಗಡೆ ವಿವಾದ | ಪಟ್ಟು ಬಿಡದ ತಮಿಳುನಾಡು | ಕಾವೇರಿ ಸಭೆಯಲ್ಲಿ ಕರ್ನಾಟಕದ ಪ್ರತಿ ಬಾಣ |

Share

ಇನ್ನೊಬ್ಬರು ಹಾಳಾದರೂ ತೊಂದರೆ ಇಲ್ಲ.. ನಾವು ಚೆನ್ನಾಗಿರಬೇಕು ಅನ್ನುವ ಜಾಯಮಾನ, ತಮಿಳುನಾಡು  ಸರ್ಕಾರದ್ದುt. ನಮ್ಮ ರಾಜ್ಯದ ರೈತರೇ ನೀರಿಲ್ಲದೆ ಪರಿತಪಿಸುವಂತಾಗಿದೆ. ಅಂತದ್ದರಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನೀರು ಬಿಟ್ಟೇ ತೀರಬೇಕು ಎಂದು ಒತ್ತಾಯಿಸುತ್ತಲೇ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಭೆ ನಡೆಯುತ್ತಿದ್ದು, ತಮಿಳುನಾಡು ಪ್ರತಿನಿಧಿಗಳು ನೀರನ್ನು ಬಿಡುಗಡೆ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇತ್ತ ಕರ್ನಾಟಕದ ಸರ್ಕಾರ ವಾಸ್ತವ ಪರಿಸ್ಥಿತಿಯನ್ನುತಿಳಿಸಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ ಎನ್ನಲಾಗಿದೆ.

Advertisement
Advertisement

50 ಟಿಎಂಸಿ ನೀರಿಗೆ ಪಟ್ಟು: ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಅಧಿಕಾರ ಸಭೆಯಲ್ಲಿ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ತಮಿಳುನಾಡು ಪ್ರತಿನಿಧಿಗಳು, ಜೂನ್​ 1ರಿಂದ ಜೂನ್​ 1ರಿಂದ ಆಗಸ್ಟ್​ 27ರವರೆಗೆ 80.17 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಇದುವರೆಗೆ 30.17 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಮುಂದಿನ 10 ದಿನಗಳಲ್ಲಿ ಬಾಕಿ ಉಳಿಸಿಕೊಂಡಿರುವ 50.10 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.

Advertisement

5000 ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ: ತಮಿಳುನಾಡು ಸರ್ಕಾರದ ಪರವಾಗಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದಾರೆ. ಸೋಮವಾರ ನಡೆಸಿದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ತಿಳಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಪ್ರತಿನಿಧಿಗಳು CWRC ಸೂಚನೆಯ ವಿರುದ್ಧವಾಗಿ ಇಂದು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದಲ್ಲಿ ಪ್ರಶ್ನಿಸಿತ್ತು. ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರಿನ ಬದಲು 3000 ಕ್ಯೂಸೆಕ್ ಬಿಡುತ್ತೇವೆ ಎಂದು ತಿಳಿಸಿತ್ತು ಎನ್ನಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಶೇ. 47ರಷ್ಟು ಕೊರೆತೆಯಾಗಿದೆ. ಜಲಾಶಯಗಳು ಬರ್ತಿಯಾಗಿಲ್ಲ. ಒಂದು ವೇಳೆ ನೀರು ಬಿಟ್ಟರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಿಗೆ ಕುಡಿಯುವ ನೀರು ಕೊರತೆಯಾಗಲಿದೆ ಎಂದು ಕರ್ನಾಟಕ ಸಭೆಯಲ್ಲಿ ತಿಳಿಸಿದೆ. ತಮಿಳುನಾಡಿಗೆ ಹದಿನೈದು ದಿನಗಳ ಕಾಲ 5 ಸಾವಿರ ಘನ ಅಡಿ ನೀರು ಹರಿಸಲು ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವ ಬಗ್ಗೆ ಮಾತನಾಡಿದ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ನಮ್ಮಲ್ಲಿ ನೀರಿಲ್ಲ, ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಜಾರಿಗೊಳಿಸುವುದು ಕಷ್ಟ, ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಬಿಡಲೇ ಬೇಕೆಂದು ಸೂಚಿಸಿದರೆ ಕಾನೂನು ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

Advertisement

Source: Digital Media 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ

ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ…

2 hours ago

ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ

30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

12 hours ago

ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |

ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ…

16 hours ago

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

1 day ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

1 day ago